ನಗರಸಭೆ ಸದಸ್ಯರಾದ ರಜನಿ, ನಾಗರತ್ನಮ್ಮ ನಡುವೆ ತಿಕ್ಕಾಟ: ಮೂಲಭೂತ ಸೌಕರ್ಯಗಳಿಂದ ವಂಚಿತರಾದ ರೋಜಿಪುರದ ಒಂದನೇ ಮುಖ್ಯರಸ್ತೆ ನಿವಾಸಿಗಳು

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರೋಜಿಪುರ ಬಡಾವಣೆ ಹಾಗೂ ಕೋರ್ಟ್ ಮುಂಭಾಗದ ನಾಲ್ಕನೇ ವಾರ್ಡ್ ವಿನಾಯಕ ನಗರ ಗಡಿ ಭಾಗದಲ್ಲಿರುವ 1ನೇ ಮುಖ್ಯರಸ್ತೆಯಲ್ಲಿ ಕಾಲಕ್ಕೆ ತಕ್ಕಂತೆ ರಸ್ತೆ ದುರಸ್ತಿ, ಚರಂಡಿ‌ ದುರಸ್ತಿಯಾಗುತ್ತಿಲ್ಲ, ವಿದ್ಯುತ್ ಬಲ್ಬ್, ಚರಂಡಿ ಸ್ವಚ್ಛತೆ, ಕುಡಿಯುವ ನೀರಿನ ಸಮಸ್ಯೆ, ಕಸದ ಸಮಸ್ಯೆ ತಾಂಡವಾಡುತ್ತಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ರೋಜಿಪುರ ಬಡಾವಣೆ ಹಾಗೂ ಕೋರ್ಟ್ ಮುಂಭಾಗದ ನಾಲ್ಕನೇ ವಾರ್ಡ್ ವಿನಾಯಕ ನಗರ ಗಡಿ ಭಾಗದಲ್ಲಿರುವ 1ನೇ ಮುಖ್ಯರಸ್ತೆಯು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ರೋಜಿಪುರ ಕೌನ್ಸಿಲರ್ ರಜನಿ ಸುಬ್ರಮಣಿ, ವಿನಾಯಕನಗರ ಕೌನ್ಸಿಲರ್ ನಾಗರತ್ನಮ್ಮ ಕೃಷ್ಣಮೂರ್ತಿ ಹೇಳುತ್ತಿದ್ದಾರೆ. ಇವರಿಬ್ಬರ ಗೊಂದಲ, ಕಿತ್ತಾಟ, ತಿಕ್ಕಾಟದಲ್ಲಿ ಈ ರಸ್ತೆಯಲ್ಲಿ ವಾಸ ಮಾಡುವ ನಮಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮತಕ್ಕಾಗಿ ರೋಜಿಪುರ ಹಾಗೂ ವಿನಾಯಕನಗರ ವಾರ್ಡ್ ನವರು ಬರುತ್ತಾರೆ. ಗೆದ್ದ ನಂತರ ಈ ರಸ್ತೆ ನಮಗೆ ಬರೋದಿಲ್ಲ ಎಂದು ಹೇಳಿ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಕಣ್ಮುಚ್ಚಿ ಕುಳಿತುಕೊಳ್ಳುತ್ತಾರೆ ಎಂದು ಪ್ರದೀಪ್ ಆರೋಪಿಸಿದರು‌.

ರಸ್ತೆಯು ಚರಂಡಿಗಿಂತ ಮೇಲ್ಮಟದಲ್ಲಿದೆ. ಚರಂಡಿಯಲ್ಲಿ ಗಿಡಗಂಟಿಗಳು, ಮಣ್ಣು ಸೇರಿದಂತೆ ಕಸಕಡ್ಡಿ‌ ತುಂಬಿಕೊಂಡು ಚರಂಡಿ ಇರೋದು ಕಾಣೋದೇ ಇಲ್ಲ. ಈ‌ ಕಾರಣ ಮಳೆ‌ ನೀರು ಸಾರಾಗವಾಗಿ ಹರಿಯದೇ ಅಕ್ಕಪಕ್ಕದ ಮನೆಗಳಿಗೆ ನುಗ್ಗುತ್ತದೆ‌. ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತದೆ ಎಂದರು.

ಮನೆಗಳ ಮೇಲೆ ದೊಡ್ಡ ರೆಂಬೆಕೊಂಬೆಗಳು ಹಾದುಹೊಗಿವೆ ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲ. ಕಳ್ಳರ ಕಾಟ ಹೆಚ್ಚಾಗಿದೆ. ಹಾವುಗಳು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕಸ ಸೂಕ್ತ ರೀತಿಯಲ್ಲಿ ವಿಲೇವಾರಿಯಾಗದ ಕಾರಣ ದುರ್ವಾಸನೆ ಹೆಚ್ಚಾಗಿದೆ. ಕಸ ತಿನ್ನಲು ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳ ಕಾಟಕ್ಕೆ ಮಕ್ಕಳು ಓಡಾಡಲು ಭಯಪಡುತ್ತಿದ್ದಾರೆ. ನಮ್ಮ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳುವುದು. ನಾವು ಕಂದಾಯ ಕಟ್ಟಲ್ವಾ…? ನೀರಿನ ಬಿಲ್ ಕಟ್ಟಲ್ವಾ…? ವಿದ್ಯುತ್ ಬಿಲ್ ಕಟ್ಟಲ್ವಾ…? ಮತ್ತೆ ನಮಗೇಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಮೊದಲು ನಮ್ಮ ರಸ್ತೆಯನ್ನು ಯಾವುದಾದರು ಒ‍ಂದು ವಾರ್ಡ್ ಗೆ ಸೇರಿಸಬೇಕು. ನಮಗೆ ಕೌನ್ಸಿಲರ್ ಯಾರೆಂದು ತಿಳಿಸಬೇಕು. ತದನಂತರ ನಮಗೆ ಬೇಕಾಗುವ ಸವಲತ್ತುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು….

ಈ ಕುರಿತು ವಿನಾಯಕ ನಗರ ಕೌನ್ಸಿಲರ್ ನಾಗರತ್ನಮ್ಮ ಕೃಷ್ಣಮೂರ್ತಿ ಮಾತನಾಡಿ, ಚೆಕ್ ಬಂದಿ ಪ್ರಕಾರ ಈ ರಸ್ತೆ ವಿನಾಯಕನಗರ ವಾರ್ಡ್ ಗೆ ಬರೋದಿಲ್ಲ.‌ ಒಂದು ವೇಳೆ ನಾವು ಆ ವಾರ್ಡ್ ನಸಮಸ್ಯೆ ಬಗೆಹರಿಸಲು ಹೋದಾಗ ಅಲ್ಲಿನ‌ ಸದಸ್ಯೆರು ಆಕ್ಷೇಪಣೆ ವ್ಯಕ್ತಪಡಿಸುತ್ತಾರೆ. ಆದ್ದರಿಂದ ನಾವು ಈ ರಸ್ತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗುವುದಿಲ್ಲ ಎಂದು ಹೇಳಿದರು.

ರೋಜಿಪುರ ವಾರ್ಡ್ ಸದಸ್ಯೆ ರಜನಿ ಸುಬ್ರಮಣಿ ಮಾತನಾಡಿ, ಈ ರಸ್ತೆಯಲ್ಲಿನ ನಿವಾಸಿಗಳು ವಿನಾಯಕ ನಗರ ವಾರ್ಡ್ ಮತಗಟ್ಟೆಗೆ ಸೇರುತ್ತಾರೆ. ಮತದಾನವನ್ನು ಸಹ ಆ ವಾರ್ಡ್ ಸದಸ್ಯರಿಗೆ ಹಾಕಿರುತ್ತಾರೆ. ಆದ್ದರಿಂದ ವಿನಾಯಕ ನಗರದ ಸದಸ್ಯರೇ ಅಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಹೇಳಿದರು….

ಒಟ್ಟಿನಲ್ಲಿ ರೋಜಿಪುರ ವಾರ್ಡ್, ವಿನಾಯಕ ನಗರ ವಾರ್ಡ್ ಕೌನ್ಸಿಲರ್ ಗಳ ಗೊಂದಲ, ತಿಕ್ಕಾಟ, ಕಿತ್ತಾಟದಿಂದ ಇಲ್ಲಿನ ನಿವಾಸಿಗಳು ಮೂಲಭೂತ ಸವಲತ್ತುಗಳು ಇಲ್ಲದೇ ತೀವ್ರ ತೊಂದರೆಗೆ ಸಿಲುಕಿದ್ದಾರೆ….

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

2 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

3 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

4 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

8 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

14 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago