ನಗರಸಭೆ ಸದಸ್ಯರಾದ ರಜನಿ, ನಾಗರತ್ನಮ್ಮ ನಡುವೆ ತಿಕ್ಕಾಟ: ಮೂಲಭೂತ ಸೌಕರ್ಯಗಳಿಂದ ವಂಚಿತರಾದ ರೋಜಿಪುರದ ಒಂದನೇ ಮುಖ್ಯರಸ್ತೆ ನಿವಾಸಿಗಳು

ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯ ರೋಜಿಪುರ ಬಡಾವಣೆ ಹಾಗೂ ಕೋರ್ಟ್ ಮುಂಭಾಗದ ನಾಲ್ಕನೇ ವಾರ್ಡ್ ವಿನಾಯಕ ನಗರ ಗಡಿ ಭಾಗದಲ್ಲಿರುವ 1ನೇ ಮುಖ್ಯರಸ್ತೆಯಲ್ಲಿ ಕಾಲಕ್ಕೆ ತಕ್ಕಂತೆ ರಸ್ತೆ ದುರಸ್ತಿ, ಚರಂಡಿ‌ ದುರಸ್ತಿಯಾಗುತ್ತಿಲ್ಲ, ವಿದ್ಯುತ್ ಬಲ್ಬ್, ಚರಂಡಿ ಸ್ವಚ್ಛತೆ, ಕುಡಿಯುವ ನೀರಿನ ಸಮಸ್ಯೆ, ಕಸದ ಸಮಸ್ಯೆ ತಾಂಡವಾಡುತ್ತಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಗರಸಭೆ ಸಂಪೂರ್ಣ ವಿಫಲವಾಗಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ರೋಜಿಪುರ ಬಡಾವಣೆ ಹಾಗೂ ಕೋರ್ಟ್ ಮುಂಭಾಗದ ನಾಲ್ಕನೇ ವಾರ್ಡ್ ವಿನಾಯಕ ನಗರ ಗಡಿ ಭಾಗದಲ್ಲಿರುವ 1ನೇ ಮುಖ್ಯರಸ್ತೆಯು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ರೋಜಿಪುರ ಕೌನ್ಸಿಲರ್ ರಜನಿ ಸುಬ್ರಮಣಿ, ವಿನಾಯಕನಗರ ಕೌನ್ಸಿಲರ್ ನಾಗರತ್ನಮ್ಮ ಕೃಷ್ಣಮೂರ್ತಿ ಹೇಳುತ್ತಿದ್ದಾರೆ. ಇವರಿಬ್ಬರ ಗೊಂದಲ, ಕಿತ್ತಾಟ, ತಿಕ್ಕಾಟದಲ್ಲಿ ಈ ರಸ್ತೆಯಲ್ಲಿ ವಾಸ ಮಾಡುವ ನಮಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಮತಕ್ಕಾಗಿ ರೋಜಿಪುರ ಹಾಗೂ ವಿನಾಯಕನಗರ ವಾರ್ಡ್ ನವರು ಬರುತ್ತಾರೆ. ಗೆದ್ದ ನಂತರ ಈ ರಸ್ತೆ ನಮಗೆ ಬರೋದಿಲ್ಲ ಎಂದು ಹೇಳಿ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಕಣ್ಮುಚ್ಚಿ ಕುಳಿತುಕೊಳ್ಳುತ್ತಾರೆ ಎಂದು ಪ್ರದೀಪ್ ಆರೋಪಿಸಿದರು‌.

ರಸ್ತೆಯು ಚರಂಡಿಗಿಂತ ಮೇಲ್ಮಟದಲ್ಲಿದೆ. ಚರಂಡಿಯಲ್ಲಿ ಗಿಡಗಂಟಿಗಳು, ಮಣ್ಣು ಸೇರಿದಂತೆ ಕಸಕಡ್ಡಿ‌ ತುಂಬಿಕೊಂಡು ಚರಂಡಿ ಇರೋದು ಕಾಣೋದೇ ಇಲ್ಲ. ಈ‌ ಕಾರಣ ಮಳೆ‌ ನೀರು ಸಾರಾಗವಾಗಿ ಹರಿಯದೇ ಅಕ್ಕಪಕ್ಕದ ಮನೆಗಳಿಗೆ ನುಗ್ಗುತ್ತದೆ‌. ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತದೆ ಎಂದರು.

ಮನೆಗಳ ಮೇಲೆ ದೊಡ್ಡ ರೆಂಬೆಕೊಂಬೆಗಳು ಹಾದುಹೊಗಿವೆ ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲ. ಕಳ್ಳರ ಕಾಟ ಹೆಚ್ಚಾಗಿದೆ. ಹಾವುಗಳು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕಸ ಸೂಕ್ತ ರೀತಿಯಲ್ಲಿ ವಿಲೇವಾರಿಯಾಗದ ಕಾರಣ ದುರ್ವಾಸನೆ ಹೆಚ್ಚಾಗಿದೆ. ಕಸ ತಿನ್ನಲು ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳ ಕಾಟಕ್ಕೆ ಮಕ್ಕಳು ಓಡಾಡಲು ಭಯಪಡುತ್ತಿದ್ದಾರೆ. ನಮ್ಮ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳುವುದು. ನಾವು ಕಂದಾಯ ಕಟ್ಟಲ್ವಾ…? ನೀರಿನ ಬಿಲ್ ಕಟ್ಟಲ್ವಾ…? ವಿದ್ಯುತ್ ಬಿಲ್ ಕಟ್ಟಲ್ವಾ…? ಮತ್ತೆ ನಮಗೇಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಮೊದಲು ನಮ್ಮ ರಸ್ತೆಯನ್ನು ಯಾವುದಾದರು ಒ‍ಂದು ವಾರ್ಡ್ ಗೆ ಸೇರಿಸಬೇಕು. ನಮಗೆ ಕೌನ್ಸಿಲರ್ ಯಾರೆಂದು ತಿಳಿಸಬೇಕು. ತದನಂತರ ನಮಗೆ ಬೇಕಾಗುವ ಸವಲತ್ತುಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು….

ಈ ಕುರಿತು ವಿನಾಯಕ ನಗರ ಕೌನ್ಸಿಲರ್ ನಾಗರತ್ನಮ್ಮ ಕೃಷ್ಣಮೂರ್ತಿ ಮಾತನಾಡಿ, ಚೆಕ್ ಬಂದಿ ಪ್ರಕಾರ ಈ ರಸ್ತೆ ವಿನಾಯಕನಗರ ವಾರ್ಡ್ ಗೆ ಬರೋದಿಲ್ಲ.‌ ಒಂದು ವೇಳೆ ನಾವು ಆ ವಾರ್ಡ್ ನಸಮಸ್ಯೆ ಬಗೆಹರಿಸಲು ಹೋದಾಗ ಅಲ್ಲಿನ‌ ಸದಸ್ಯೆರು ಆಕ್ಷೇಪಣೆ ವ್ಯಕ್ತಪಡಿಸುತ್ತಾರೆ. ಆದ್ದರಿಂದ ನಾವು ಈ ರಸ್ತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗುವುದಿಲ್ಲ ಎಂದು ಹೇಳಿದರು.

ರೋಜಿಪುರ ವಾರ್ಡ್ ಸದಸ್ಯೆ ರಜನಿ ಸುಬ್ರಮಣಿ ಮಾತನಾಡಿ, ಈ ರಸ್ತೆಯಲ್ಲಿನ ನಿವಾಸಿಗಳು ವಿನಾಯಕ ನಗರ ವಾರ್ಡ್ ಮತಗಟ್ಟೆಗೆ ಸೇರುತ್ತಾರೆ. ಮತದಾನವನ್ನು ಸಹ ಆ ವಾರ್ಡ್ ಸದಸ್ಯರಿಗೆ ಹಾಕಿರುತ್ತಾರೆ. ಆದ್ದರಿಂದ ವಿನಾಯಕ ನಗರದ ಸದಸ್ಯರೇ ಅಲ್ಲಿನ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಹೇಳಿದರು….

ಒಟ್ಟಿನಲ್ಲಿ ರೋಜಿಪುರ ವಾರ್ಡ್, ವಿನಾಯಕ ನಗರ ವಾರ್ಡ್ ಕೌನ್ಸಿಲರ್ ಗಳ ಗೊಂದಲ, ತಿಕ್ಕಾಟ, ಕಿತ್ತಾಟದಿಂದ ಇಲ್ಲಿನ ನಿವಾಸಿಗಳು ಮೂಲಭೂತ ಸವಲತ್ತುಗಳು ಇಲ್ಲದೇ ತೀವ್ರ ತೊಂದರೆಗೆ ಸಿಲುಕಿದ್ದಾರೆ….

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

4 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

5 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

9 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

16 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

19 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago