ದೊಡ್ಡಬಳ್ಳಾಪುರ ನಗರದ ಹೇಮಾವತಿಪೇಟೆಯ ನಗರಸಭಾ ಸದಸ್ಯ ಭಾಸ್ಕರ್ (55) ಅನಾರೋಗ್ಯದ ಕಾರಣ ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೋಮವಾರ) ಮುಂಜಾನೆ ಮೃತಪಟ್ಟಿದ್ದಾರೆ.
ಮೃತರು ಮಡದಿ ಮತ್ತು ಮಗನನ್ನು ಅಗಲಿದ್ದಾರೆ.
ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 9 ಗಂಟೆ ಬಳಿಕ ಹೇಮಾವತಿ ಪೇಟೆಯ ಸ್ವಗೃಹದ ಬಳಿ ಅವಕಾಶ ಕಲ್ಪಿಸಲಾಗುತ್ತಿದೆ.
ಅಂತ್ಯಕ್ರಿಯೆ ಮುಕ್ತಿಧಾಮದಲ್ಲಿ ನಡೆಯಲಿದ್ದು, ಸಮಯ ನಿಗದಿಯಾಗಿಲ್ಲವೆಂದು ಕುಟುಂಬದ ಮೂಲಗಳು ತಿಳಿಸಿವೆ.
ಕರ್ನಾಟಕ ಛಾಯಾಗ್ರಾಹಕರ ಸಂಘದ ಮಾಜಿ ನಿರ್ದೇಶಕರಾಗಿ, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಭಾಸ್ಕರ್ ಅವರು ನಗರಸಭೆಗೆ ಎರಡನೇ ಭಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದರು.
ಭಾಸ್ಕರ್ ಅಗಲಿಕೆಗೆ ಶಾಸಕ ಧೀರಜ್ ಮುನಿರಾಜ್, ನಗರಸಭಾ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸದಸ್ಯರು ಶ್ರದ್ಧಾಂಜಲಿ ಕೋರಿದ್ದಾರೆ.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…