ದೊಡ್ಡಬಳ್ಳಾಪುರ ನಗರದ ಹೇಮಾವತಿಪೇಟೆಯ ನಗರಸಭಾ ಸದಸ್ಯ ಭಾಸ್ಕರ್ (55) ಅನಾರೋಗ್ಯದ ಕಾರಣ ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೋಮವಾರ) ಮುಂಜಾನೆ ಮೃತಪಟ್ಟಿದ್ದಾರೆ.
ಮೃತರು ಮಡದಿ ಮತ್ತು ಮಗನನ್ನು ಅಗಲಿದ್ದಾರೆ.
ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 9 ಗಂಟೆ ಬಳಿಕ ಹೇಮಾವತಿ ಪೇಟೆಯ ಸ್ವಗೃಹದ ಬಳಿ ಅವಕಾಶ ಕಲ್ಪಿಸಲಾಗುತ್ತಿದೆ.
ಅಂತ್ಯಕ್ರಿಯೆ ಮುಕ್ತಿಧಾಮದಲ್ಲಿ ನಡೆಯಲಿದ್ದು, ಸಮಯ ನಿಗದಿಯಾಗಿಲ್ಲವೆಂದು ಕುಟುಂಬದ ಮೂಲಗಳು ತಿಳಿಸಿವೆ.
ಕರ್ನಾಟಕ ಛಾಯಾಗ್ರಾಹಕರ ಸಂಘದ ಮಾಜಿ ನಿರ್ದೇಶಕರಾಗಿ, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಭಾಸ್ಕರ್ ಅವರು ನಗರಸಭೆಗೆ ಎರಡನೇ ಭಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದರು.
ಭಾಸ್ಕರ್ ಅಗಲಿಕೆಗೆ ಶಾಸಕ ಧೀರಜ್ ಮುನಿರಾಜ್, ನಗರಸಭಾ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸದಸ್ಯರು ಶ್ರದ್ಧಾಂಜಲಿ ಕೋರಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…