ದೊಡ್ಡಬಳ್ಳಾಪುರ ನಗರದ ಹೇಮಾವತಿಪೇಟೆಯ ನಗರಸಭಾ ಸದಸ್ಯ ಭಾಸ್ಕರ್ (55) ಅನಾರೋಗ್ಯದ ಕಾರಣ ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾಸ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಸೋಮವಾರ) ಮುಂಜಾನೆ ಮೃತಪಟ್ಟಿದ್ದಾರೆ.
ಮೃತರು ಮಡದಿ ಮತ್ತು ಮಗನನ್ನು ಅಗಲಿದ್ದಾರೆ.
ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 9 ಗಂಟೆ ಬಳಿಕ ಹೇಮಾವತಿ ಪೇಟೆಯ ಸ್ವಗೃಹದ ಬಳಿ ಅವಕಾಶ ಕಲ್ಪಿಸಲಾಗುತ್ತಿದೆ.
ಅಂತ್ಯಕ್ರಿಯೆ ಮುಕ್ತಿಧಾಮದಲ್ಲಿ ನಡೆಯಲಿದ್ದು, ಸಮಯ ನಿಗದಿಯಾಗಿಲ್ಲವೆಂದು ಕುಟುಂಬದ ಮೂಲಗಳು ತಿಳಿಸಿವೆ.
ಕರ್ನಾಟಕ ಛಾಯಾಗ್ರಾಹಕರ ಸಂಘದ ಮಾಜಿ ನಿರ್ದೇಶಕರಾಗಿ, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಭಾಸ್ಕರ್ ಅವರು ನಗರಸಭೆಗೆ ಎರಡನೇ ಭಾರಿಗೆ ಸದಸ್ಯರಾಗಿ ಆಯ್ಕೆಯಾಗಿದ್ದರು.
ಭಾಸ್ಕರ್ ಅಗಲಿಕೆಗೆ ಶಾಸಕ ಧೀರಜ್ ಮುನಿರಾಜ್, ನಗರಸಭಾ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು, ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಸದಸ್ಯರು ಶ್ರದ್ಧಾಂಜಲಿ ಕೋರಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…