ಕೋಲಾರ: ನಗರಸಭೆಯ ನೂತನ ಸಮಿತಿ ಆಯ್ಕೆಗೂ ಮೊದಲಿಂದ ಆಡಳಿತಾಧಿಕಾರಿ ಅವಧಿಯಲ್ಲಿ ನಗರದಲ್ಲಿ ನಡೆದಿರುವ ಕಾಮಗಾರಿಗಳು ಮತ್ತು ಬಿಲ್ ಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ತನಿಖೆ ನಡೆಸಲು ಲೋಕಾಯುಕ್ತಗೆ ದೂರು ನೀಡಲು ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ನಿರ್ಧರಿಸಲಾಯಿತು.
ನಗರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ತಮ್ಮ ತಮ್ಮ ವಾರ್ಡ್ ಗಳಲ್ಲಿ ಏನು ನಡೆದಿದೆ ಅಂತ ನಮಗೆ ಮಾಹಿತಿನೇ ಇರಲ್ಲ ನಗರಸಭೆಯ ಸದಸ್ಯರಿಗೆ ಗೊತ್ತಿಲ್ಲ ಆದರೂ ವಾರ್ಡ್ ಗೆ ಸಂಬಂಧಿಸಿದಂತೆ ಬಿಲ್ ಪಾವತಿಯಾಗಿದೆ ಇದಕ್ಕೆ ಯಾರು ಹೊಣೆ ಇದನ್ನು ಈಗೇ ಬಿಟ್ಟರೆ ಮುಂದೆ ಇಂತಹ ಅಕ್ರಮ ಬಿಲ್ ಗಳು ಹೆಚ್ಚಾಗುತ್ತದೆ ಇದಕ್ಕೆ ಕಡಿವಾಣ ಹಾಕಬೇಕಾದರೆ ಲೋಕಾಯುಕ್ತ ಸಂಸ್ಥೆಯಿಂದ ತನಿಖೆಯಾಗಲೇ ಬೇಕು ಮುಂದೆ ಯಾವುದೇ ಕಾರಣಕ್ಕೂ ಅಧ್ಯಕ್ಷರು ಪರಿಶೀಲನೆ ನಡೆಯದೆ ಬಿಲ್ ಪಾವತಿ ಮಾಡಬಾರದು ಎಂದು ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ನಗರಸಭೆ ಅಧಿಕಾರಿಗಳು ಎಂದರೆ ನೀವು ಏನು ಅಂದುಕೊಂಡಿದ್ದರಾ ನೀವೇನೇ ಸುಪ್ರೀಂ ಅನ್ನೊದನ್ನು ಬಿಡಿ ನೀವು ಕುದುರೆ ಅಲ್ಲ ಬರೀ ಬಾಲ ಅಷ್ಟೇ ಸಾರ್ವಜನಿಕರು ಕೆಲಸವಾಗಿಲ್ಲ ಎಂದರೆ ಯಾರು ಅಧಿಕಾರಿಗಳ ಮನೆ ಬಾಗಿಲು ತಟ್ಟಲ್ಲ ನಗರಸಭೆ ಸದಸ್ಯರ ಮನೆ ಬಾಗಿಲು ತಟ್ಟೋದು ಅಧಿಕಾರಿಗಳು ನಗರಸಭೆ ಕಚೇರಿಯೊಳಗೆ ಕುಳಿತುಕೊಂಡು ಬಿಲ್ ಗಳು ಮಾಡಿಕೊಂಡು ಇದ್ದುಬಿಡಿ ಎಂದರು.
ನಗರಕ್ಕೆ ಗ್ಯಾಸ್ ಪೈಪ್ ಲೈನ್ ಅಳವಡಿಕೆ ಸಂಬಂಧ ತಮಿಳುನಾಡಿನ ಏಜೆನ್ಸಿಯವರು ಬಂದಿದ್ದರು. ನೆಲ ಅಗೆಯುವಾಗ ಕೇಬಲ್ ಅಥವಾ ಪೈಪ್ ಗೆ ಧಕ್ಕೆಯಾದರೆ ತಾವೇ ಸರಿಪಡಿಸುವ ಬಗ್ಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಹೇಳಿದ್ದೇನೆ. ಚರ್ಚೆ ಹಂತದಲ್ಲಿದ್ದು, ನಗರಸಭೆ ಸದಸ್ಯರ ಜೊತೆ ಚರ್ಚೆ ಮಾಡಬೇಕು. ಒಪ್ಪಂದ ಇಲ್ಲದಿದ್ದರೆ ಕೊಡಲ್ಲ ಎಂದು ಈಗಾಗಲೇ ಅವರಿಗೆ ಹೇಳಲಾಗಿದೆ ಎಂದರು.
ನಗರಸಭೆ ಸದಸ್ಯ ಮುರಳಿಗೌಡ ಮಾತನಾಡಿ ನಗರಕ್ಕೆ ನೀರು ಸರಬರಾಜು ಮಾಡುವ ಅಮ್ಮೇರಹಳ್ಳಿ ಕೆರೆಯಿಂದ ವಾರ್ಡ್ಗಳಿಗೆ ನೀರು ಬರತ್ತಾ ಇಲ್ಲ ಆದರೂ ಬಿಲ್ ಗಳು ಆಗಿವೆ ವರ್ಷಕ್ಕೆ ಎಷ್ಟು ಬಾರಿ ಪಂಪ್ ಹೌಸ್ ರಿಪೇರಿ ಅಂತ ಬಿಲ್ ಮಾಡತ್ತಾರೆ ಪರಿಶೀಲನೆ ಮಾಡಬೇಕು ಬಸವನತ್ತದಲ್ಲಿರುವ ನಗರಸಭೆಗೆ ಸೇರಿದ ಜಮೀನು ಸರ್ವೇ ಮಾಡಿ ಎಂದು ಕೋರಿದರು.
ಸದಸ್ಯ ಪ್ರವೀಣ್ ಗೌಡ ಮಾತನಾಡಿ ನಗರಸಭೆ ವ್ಯಾಪ್ತಿಯಲ್ಲಿ ಎಷ್ಟು ನಿವೇಶನಗಳು ಇವೆ ಹೊರಗಡೆ ಪ್ರದೇಶದ ಎಷ್ಟು ಜಮೀನು ನಗರಸಭೆಗೆ ಮಂಜೂರು ಆಗಿದೆ ಮಾಹಿತಿ ಕೊಡಿ ಖಾದ್ರಿಪುರದಲ್ಲಿ ಎರಡು ಸರ್ವೇ ನಂಬರ್ ಗಳಲ್ಲಿ ನಗರಸಭೆಯ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಕೊಡಲಾಗಿದೆ. ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಬಡವರಿಗೆ ವಿತರಿಸಲು ಮೀಸಲಿರುವ ಜಾಗ ಉಳಿಸಿಕೊಳ್ಳಿ ವಶಕ್ಕೆ ಪಡೆದು ಬೇಲಿ ಹಾಕಿ ನಗರಸಭೆ ವ್ಯಾಪ್ತಿಯ ಗುಂಡುತೋಪುಗಳಲ್ಲಿ ಅಕ್ರಮ ನಡೆದಿದೆ ಎಂದು ದೂರಿದರು.
ಭೂಮಾಫಿಯಾದಿಂದ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಆರೋಪ. ಈ ಬಗ್ಗೆ ೩೫ ವಾರ್ಡ್ ಗಳ ಮಾಹಿತಿ ಕೊಡಿ. ರಕ್ಣಣೆಗೆ ಮುಂದಾಗಿ.ಮಹಿಳಾ ಸಮಾಜ ಜಾಗ ನಗರಸಭೆಗೆ ಸೇರಿದ್ದು ನಗರಸಭೆ ಉಳಿಸಿಕೊಳ್ಳುವಲ್ಲಿ ಅಧಿಕಾರಿಗಳು ಬದ್ಧತೆ ತೋರಬೇಕು. ಭೂಗಳ್ಳರ ಜೊತೆ ಕೈಜೋಡಿಸಿದರೆ ಹೇಗೆ ಎಂದು ಪ್ರಶ್ನಿಸಿದರು ಆಗ ಅಧಿಕಾರಿಗಳು ಸುಮಾರು ೧೪೫ ನಿವೇಶನ, ೨೮ ಸಿಎ ನಿವೇಶನ, ೩೦ಪಾರ್ಕ್ ಇವೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸದಸ್ಯ ಸುರೇಶ್ ಬಾಬು ಮಾತನಾಡಿ ಸ್ವಚ್ಛ ಭಾರತ್ ಮಿಷನ್ 1-0 ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು ಎಲ್ಲಾ ವಸ್ತುಗಳನ್ನು ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು ಬೆಲೆಗೆ ಖರೀದಿಸಿದ್ದಾರೆ ತನಿಖೆ ಮಾಡಿ ಶಾಮೀಲಾಗಿರುವ ಅಧಿಕಾರಿಗಳನ್ನು ಅಮಾನತು ಮಾಡಿ ಉಳಿದ ಅಧಿಕಾರಿಗಳಿಗೆ ಎಚ್ಚರಿಕೆ ಬರುತ್ತದೆ ಎಂದು ಒತ್ತಾಯಿಸಿದರು.
ನಗರಸಭೆಗೆ ಸೇರಿದ ಸರ್ಕಾರಿ ಸ್ವತ್ತುಗಳ ಒತ್ತುವರಿ, ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದು ಮಹಿಳಾ ಸಮಾಜ ಜಾಗವು ೫೦ ಕೋಟಿ ದಯವಿಟ್ಟು ಕ್ರಮಕೈಗೊಳ್ಳಿ, ವಶಕ್ಕೆ ಪಡೆದರೆ ನಗರಸಭೆಗೆ ಆದಾಯ ಬರುತ್ತದೆ ೧೭ನೇ ವಾರ್ಡ್ ನಲ್ಲಿರುವ ಉದ್ಯಾನದಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿದ್ದಾರೆ ಅಧಿಕಾರಿಗಳ ಹೇಳಿದರು ಕನಿಷ್ಠ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ ಎಂದು ಆರೋಪಿಸಿದರು
ಇದಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ಕೂಡಲೇ ಅಧಿಕಾರಿಗಳು ಭೇಟಿ ನೀಡಿ ದಾಖಲೆ ಕೇಳಿ ಅಕ್ರಮವಾಗಿ ಕಟ್ಟಿರುವುದು ಗೊತ್ತಾಗುತ್ತದೆ ಕೂಡಲೇ ವಶಕ್ಕೆ ಪಡೆಯಿರಿ ಕಟ್ಟಡ ತೆರವುಗೊಳಿಸಿ ಹೀಗೆ ಉಳಿದ ವಾರ್ಡ್ ಗಳಲ್ಲೂ ಪರಿಶೀಲನೆ ಮಾಡಿ ಪೊಲೀಸರಿಗೆ ಮನವಿ ಮಾಡಿ ರಕ್ಷಣೆ ಪಡೆಯಿರಿ ಇಲ್ಲದಿದ್ದರೆ ಏನೂ ಮಾಡಲು ಸಾಧ್ಯವಿಲ್ಲ ಅಧಿಕಾರಿಗಳು ಕೆಲಸ ಮಾಡದಿದ್ದರೆ ನೋಟಿಸ್ ಕೊಡಿ ಜೊತೆಗೆ ನಗರದಲ್ಲಿ ಕಾಮಗಾರಿ ಸಂಬಂಧ ಕೆಲಸ ಮಾಡದ ಗುತ್ತಿಗೆದಾರರಿಗೆ ನೋಟಿಸ್ ಕೊಡಿ. ಆಗಲೂ ಉತ್ತರ ಕೊಡದಿದ್ದರೆ ಕಪ್ಪು ಪಟ್ಟಿಗೆ ಸೇರಿಸಿ ಎಂದು ಸೂಚಿಸಿದರು.
ಸದಸ್ಯ ರಾಕೇಶ್ ಮಾತನಾಡಿ ನಗರಸಭೆಯ ಸಮಸ್ಯೆಗಳಿಗೆ ದೂರು ಕೊಟ್ಟರು ಯಾವುದೇ ಪ್ರಯೋಜನವಿಲ್ಲ ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ಎಲ್ಲಿ ದಾಖಲೆಗಳು ಸೃಷ್ಟಿಯಾಗುತ್ತವೆ ಯಾರಿಗೂ ಗೊತ್ತಿಲ್ಲ ಆದರೆ ಸಭೆಗೆ ಮಾತ್ರ ಬಿಲ್ ಪಾವತಿಯಾಗಿ ಅಂತ ಬರುತ್ತದೆ ಎಂದರು
ಸಭೆಗೆ ಭಾರಿ ಬಿಗಿ ಭದ್ರತೆ: ನಗರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ ಬಳಿಕ ನಡೆದ ಮೊದಲ ಸಭೆಗೆ ಭಾರಿ ಬಿಗಿ ಭದ್ರತೆಯಲ್ಲಿ ನಡೆಸಲಾಯಿತು ಗಲ್ ಪೇಟೆ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು
ಸಭೆಯ ಅಧ್ಯಕ್ಷತೆಯನ್ನು ಲಕ್ಷ್ಮಿದೇವಮ್ಮ ರಮೇಶ್ ವಹಿಸಿದ್ದರು ಉಪಾಧ್ಯಕ್ಷೆ ಸಂಗೀತಾ ತಹಶಿಲ್ದಾರ್ ನಯನಾ, ನಗರಸಭೆ ಪ್ರಭಾರಿ ಆಯುಕ್ತೆ ಅಂಬಿಕಾ, ಕುಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಎಂಜಿನಿಯರ್ ಶ್ರೀನಿವಾಸ್ ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…