ಕೋಲಾರ: ನಗರಸಭೆಯ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಫೈರೋಜ್ ಖಾನ್ ಅವರು ಸೋಮವಾರ ನಗರಸಭೆ ಆವರಣದ ತಮ್ಮ ಕಚೇರಿಯಲ್ಲಿ ಸೋಮವಾರ ಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫೈರೋಜ್ ಖಾನ್ ಕೋಲಾರ ನಗರಸಭೆ ವ್ಯಪ್ತೆ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ. ಅಭಿವೃದ್ಧಿ ವಿಷಯದಲ್ಲಿ ಪಕ್ಷಾತೀತವಾಗಿ ನಡೆದುಕೊಳ್ಳುವ ಮೂಲಕ ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಅಧಿಕಾರಿಗಳು ನಗರಸಭೆಗೆ ಬರುವ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು. ವೃದ್ಧರು, ಅಂಗವಿಕಲರು ಬಂದಾಗ ಹೆಚ್ಚಿನ ಕಾಳಜಿ ವಹಿಸಬೇಕು. ಸಾರ್ವಜನಿಕರು ನಗರಸಭೆ ಸಂದಾಯ ಮಾಡುವ ಎಲ್ಲಾ ರೀತಿಯ ತೆರಿಗೆ ಹಣವನ್ನು ಬಾಕಿ ಇಟ್ಟುಕೊಳ್ಳದೇ ಪಾವತಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಪೌರಾಯುಕ್ತ ಪ್ರಸಾದ್, ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಸದಸ್ಯರಾದ ಎನ್.ಅಂಬರೀಷ್, ಸುರೇಶ್ ಬಾಬು, ಅಫ್ಸರ್, ಷಾಮೀರ್, ಏಜಾಜ್, ಮಂಜುನಾಥ್ , ಕೋಮುಲ್ ನಿರ್ದೇಶಕ ಷಂಷೀರ್, ಮುಖಂಡರು, ಅಧಿಕಾರಿಗಳು ಸಿಬ್ಬಂದಿ ಇದ್ದರು.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…