ಕೋಲಾರ: ನಗರಸಭೆಯ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಫೈರೋಜ್ ಖಾನ್ ಅವರು ಸೋಮವಾರ ನಗರಸಭೆ ಆವರಣದ ತಮ್ಮ ಕಚೇರಿಯಲ್ಲಿ ಸೋಮವಾರ ಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಫೈರೋಜ್ ಖಾನ್ ಕೋಲಾರ ನಗರಸಭೆ ವ್ಯಪ್ತೆ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಮೊದಲ ಆದ್ಯತೆ ನೀಡಿ. ಅಭಿವೃದ್ಧಿ ವಿಷಯದಲ್ಲಿ ಪಕ್ಷಾತೀತವಾಗಿ ನಡೆದುಕೊಳ್ಳುವ ಮೂಲಕ ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತದೆ ಅಧಿಕಾರಿಗಳು ನಗರಸಭೆಗೆ ಬರುವ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಕೆಲಸ ಮಾಡಬೇಕು. ವೃದ್ಧರು, ಅಂಗವಿಕಲರು ಬಂದಾಗ ಹೆಚ್ಚಿನ ಕಾಳಜಿ ವಹಿಸಬೇಕು. ಸಾರ್ವಜನಿಕರು ನಗರಸಭೆ ಸಂದಾಯ ಮಾಡುವ ಎಲ್ಲಾ ರೀತಿಯ ತೆರಿಗೆ ಹಣವನ್ನು ಬಾಕಿ ಇಟ್ಟುಕೊಳ್ಳದೇ ಪಾವತಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಪೌರಾಯುಕ್ತ ಪ್ರಸಾದ್, ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರಸಭೆ ಸದಸ್ಯರಾದ ಎನ್.ಅಂಬರೀಷ್, ಸುರೇಶ್ ಬಾಬು, ಅಫ್ಸರ್, ಷಾಮೀರ್, ಏಜಾಜ್, ಮಂಜುನಾಥ್ , ಕೋಮುಲ್ ನಿರ್ದೇಶಕ ಷಂಷೀರ್, ಮುಖಂಡರು, ಅಧಿಕಾರಿಗಳು ಸಿಬ್ಬಂದಿ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…