ಕೋಲಾರ: ನಗರಸಭೆ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ನಗರೋತ್ಥಾನ ಯೋಜನೆಯ ಮೂಲಕ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ನೀವೇ ಹೇಳಿದ ಸಮಯಕ್ಕೆ ಪೂರ್ಣವಾಗಿಲ್ಲದೇ ಹೋದರೆ ಪರಿಣಾಮ ಬೇರೆ ರೀತಿಯಲ್ಲಿ ಇರುತ್ತದೆ ಎಂದು ಗುತ್ತಿಗೆದಾರನಿಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಗಡುವು ನೀಡಿದರು.
ಸೋಮವಾರ ನಗರಸಭೆಯ ಸಭಾಂಗಣದಲ್ಲಿ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಹಾಗೂ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಭಿವೃದ್ಧಿಗೆ ಹಣದ ಕೊರತೆಯಿಲ್ಲ ಕಾಮಗಾರಿಗಳು ಆಗದೆ ಸಮಸ್ಯೆ ತಂದಾಗ ಅಭಿವೃದ್ಧಿ ಹೇಗೆ ಸಾಧ್ಯ ನಗರಸಭೆ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ಪ್ರತಿನಿತ್ಯ ಕಾಮಗಾರಿಗಳ ಜೊತೆಗೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಬೇಕು ಕೇವಲ ಕಛೇರಿಗೆ ಮಾತ್ರ ಸೀಮಿತವಾಗಬಾರದು ಗುತ್ತಿಗೆದಾರನಿಗೆ ವಹಿಸಿದ್ದೇವೆ ಅವರೇ ನೋಡಿಕೊಳ್ಳತ್ತಾರೆ ಅಂತ ಕೂತರೆ ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನಪ್ರತಿನಿಧಿಗಳನ್ನು ಬೈದುಕೊಂಡು ಹೋಗತ್ತಾರೆ ಜನರಿಗೋಸ್ಕರ ಇದ್ದೇವೆ ಎಂಬುದನ್ನು ಅರ್ಥಮಾಡಿಕೊಂಡು ಹೋಗಿ ಕೆಲಸ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಧಿಕಾರಿಗಳಿಗೆ ಇಂತಿಷ್ಟು ಅಂತ ಕೆಲಸದ ಸಮಯವಿದೆ ಆದರೆ ಜನಪ್ರತಿನಿಧಿಗಳಿಗೆ ದಿನದ 24 ಗಂಟೆಯೂ ಕೂಡ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ರಾತ್ರಿ ಮಲಗಿದ್ದರೂ ಜನ ಬಿಡಲ್ಲ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಇಚ್ಛಾಶಕ್ತಿ ಇಲ್ಲದೇ ಹೋದರೆ ವರ್ಗಾವಣೆ ಮಾಡಿಕೊಂಡು ಹೋಗಿ ನಿಮ್ಮ ಜಾಗಕ್ಕೆ ಕೆಲಸ ಮಾಡೋರನ್ನು ಕರೆಸಿಕೊಳ್ಳುವುದು ನಮಗೆ ಗೊತ್ತಿದೆ ನಗರದಾದ್ಯಂತ ಬೀದಿದ್ವೀಪಗಳಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಿ ಎಷ್ಟು ಅವಶ್ಯಕತೆ ಇದೆ ಕೂಡಲೇ ಗಮನಕ್ಕೆ ತನ್ನಿ ಜೊತೆಗೆ ಪ್ರತಿ ತಿಂಗಳು ಸಮಸ್ಯೆಗಳಿಗೆ ಸಂಬಂಧಿಸಿದಂತೆಯೇ ಕೊನೆಯ ವಾರ ಸಭೆ ನಡೆಯಲಿದ್ದು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸದಸ್ಯರಾದ ರಾಕೇಶ್, ಸೂರಿ, ಮುರಳಿಗೌಡ ಮಾತನಾಡಿ ನಗರಸಭೆ ಅಧಿಕಾರಿಗಳಿಗೆ ನಾವು ಜನರಿಂದ ಆಯ್ಕೆಯಾದ ಸದಸ್ಯರು ಅಂತ ಪರಿಗಣಿಸುತ್ತಾ ಇಲ್ಲ ಕನಿಷ್ಠ ಸಮಸ್ಯೆ ಹೇಳಿದಾಗ ಪರಿಹಾರಕ್ಕೆ ಸಹ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ನಗರೋತ್ಥಾನ, ಯರಗೋಳು ಕಾಮಗಾರಿಗಳಿಗೆ ವೇಗ ನೀಡಬೇಕು, ಕಾಮಗಾರಿ ಗುಣಮಟ್ಟವನ್ನು ಕಾಪಾಡಬೇಕು, ಕ್ಯೂರಿಂಗ್ ಸರಿಯಾಗಿ ಆಗಬೇಕು,ಯುಜಿಡಿಯ ಅನಾವಶ್ಯಕವಾಗಿ ತೋಡಿದ ಗುಂಡಿಗಳನ್ನು ಕೂಡಲೇ ಮುಚ್ಚಬೇಕು ಒತ್ತಾಯಿಸಿದರು.
ಸಭೆಯಲ್ಲಿ ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ, ಇಂಜಿನಿಯರ್ ಶ್ರೀನಿವಾಸ್, ಸೇರಿದಂತೆ ಗುತ್ತಿಗೆದಾರರು ನಗರಸಭೆ ಸದಸ್ಯರು ಇದ್ದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…