Categories: ಕೋಲಾರ

ನಗರೋತ್ಥಾನ ಕಾಮಗಾರಿಗಳ ಪೂರ್ಣಕ್ಕೆ ಮೂರು ತಿಂಗಳ ಗಡುವು ನೀಡಿದ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ನಗರೋತ್ಥಾನ ಯೋಜನೆಯ ಮೂಲಕ ಹಮ್ಮಿಕೊಂಡಿರುವ ಕಾಮಗಾರಿಗಳನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ನೀವೇ ಹೇಳಿದ ಸಮಯಕ್ಕೆ ಪೂರ್ಣವಾಗಿಲ್ಲದೇ ಹೋದರೆ ಪರಿಣಾಮ ಬೇರೆ ರೀತಿಯಲ್ಲಿ ಇರುತ್ತದೆ ಎಂದು ಗುತ್ತಿಗೆದಾರನಿಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಗಡುವು ನೀಡಿದರು.

ಸೋಮವಾರ ನಗರಸಭೆಯ ಸಭಾಂಗಣದಲ್ಲಿ ನಗರಸಭೆಗೆ ಸಂಬಂಧಿಸಿದ ಕುಂದುಕೊರತೆಗಳ ಹಾಗೂ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಭಿವೃದ್ಧಿಗೆ ಹಣದ ಕೊರತೆಯಿಲ್ಲ ಕಾಮಗಾರಿಗಳು ಆಗದೆ ಸಮಸ್ಯೆ ತಂದಾಗ ಅಭಿವೃದ್ಧಿ ಹೇಗೆ ಸಾಧ್ಯ ನಗರಸಭೆ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ಪ್ರತಿನಿತ್ಯ ಕಾಮಗಾರಿಗಳ ಜೊತೆಗೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ಮಾಡಬೇಕು ಕೇವಲ ಕಛೇರಿಗೆ ಮಾತ್ರ ಸೀಮಿತವಾಗಬಾರದು ಗುತ್ತಿಗೆದಾರನಿಗೆ ವಹಿಸಿದ್ದೇವೆ ಅವರೇ ನೋಡಿಕೊಳ್ಳತ್ತಾರೆ ಅಂತ ಕೂತರೆ ಜನರಿಂದ ವೋಟ್ ಹಾಕಿಸಿಕೊಂಡ ತಪ್ಪಿಗೆ ಜನಪ್ರತಿನಿಧಿಗಳನ್ನು ಬೈದುಕೊಂಡು ಹೋಗತ್ತಾರೆ ಜನರಿಗೋಸ್ಕರ ಇದ್ದೇವೆ ಎಂಬುದನ್ನು ಅರ್ಥಮಾಡಿಕೊಂಡು ಹೋಗಿ ಕೆಲಸ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಾವು ಎಲ್ಲರೂ ನಗರದ ಅಭಿವೃದ್ಧಿಗೆ ಮೊದಲ ಅಧ್ಯತೆ ನೀಡಬೇಕು ಇದಕ್ಕೆ ಗುತ್ತಿಗೆದಾರರು ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಪ್ರತಿಯೊಬ್ಬರ ಅಭಿಪ್ರಾಯವನ್ನು ಪಡೆಯಬೇಕು ನಗರಸಭೆ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ಒಂದು ಕಾಮಗಾರಿ ಪೂರ್ಣಗೊಂಡ ನಂತರ ಮತ್ತೊಂದು ಕಾಮಗಾರಿ ಪ್ರಾರಂಭ ಮಾಡಬೇಕು ಅದು ಬಿಟ್ಟು ಪ್ರಾರಂಭ ಮಾಡಿ ಮಧ್ಯದಲ್ಲೇ ಬಿಟ್ಟರೆ ಸುಮ್ಮನೆ ಬಿಡಲ್ಲ ಎಲ್ಲಾ ಕಾಮಗಾರಿಗಳನ್ನು ಮಾಡಕ್ಕೆ ಹೋಗಿ ಸಾರ್ವಜನಿಕರ ಗುರಿಗೆ ತುತ್ತಾಗಬೇಡಿ ಅನುದಾನಕ್ಕೆ ಕೊರತೆಯಿಲ್ಲ ಆದರೆ ಕಾಮಗಾರಿಗಳು ಪೂರ್ಣಗೊಳ್ಳದೇ ಅನುದಾನ ಕೊಡಲು ಸಾಧ್ಯವಿಲ್ಲ ಎಂದರು.

ಅಧಿಕಾರಿಗಳಿಗೆ ಇಂತಿಷ್ಟು ಅಂತ ಕೆಲಸದ ಸಮಯವಿದೆ ಆದರೆ ಜನಪ್ರತಿನಿಧಿಗಳಿಗೆ ದಿನದ 24 ಗಂಟೆಯೂ ಕೂಡ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದೆ ರಾತ್ರಿ ಮಲಗಿದ್ದರೂ ಜನ ಬಿಡಲ್ಲ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಇಚ್ಛಾಶಕ್ತಿ ಇಲ್ಲದೇ ಹೋದರೆ ವರ್ಗಾವಣೆ ಮಾಡಿಕೊಂಡು ಹೋಗಿ ನಿಮ್ಮ ಜಾಗಕ್ಕೆ ಕೆಲಸ ಮಾಡೋರನ್ನು ಕರೆಸಿಕೊಳ್ಳುವುದು ನಮಗೆ ಗೊತ್ತಿದೆ ನಗರದಾದ್ಯಂತ ಬೀದಿದ್ವೀಪಗಳಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಿ ಎಷ್ಟು ಅವಶ್ಯಕತೆ ಇದೆ ಕೂಡಲೇ ಗಮನಕ್ಕೆ ತನ್ನಿ ಜೊತೆಗೆ ಪ್ರತಿ ತಿಂಗಳು ಸಮಸ್ಯೆಗಳಿಗೆ ಸಂಬಂಧಿಸಿದಂತೆಯೇ ಕೊನೆಯ ವಾರ ಸಭೆ ನಡೆಯಲಿದ್ದು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸದಸ್ಯ ಪ್ರಸಾದ್ ಬಾಬು ಮಾತನಾಡಿ, ಗುತ್ತಿಗೆದಾರನಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದೇ ವಿನಾಕಾರಣ ನಗರಸಭೆ ಸದಸ್ಯರ ಮೇಲೆ ಸುಳ್ಳು ಆರೋಪಗಳನ್ನು ಮಾಡಲು ಹೊರಟಿದ್ದಾರೆ ಪ್ರಶ್ನೆ ಮಾಡಿದರೆ ನಾವು ಲೋಕಲ್ ಅಂತಾರೆ ಲೋಕಲ್ ಆದರೆ ರಾಜಕೀಯ ಮಾಡಲಿ ಟೆಂಡರ್ ಯಾಕೆ ಬೇಕು ಇವರನ್ನು ಮೊದಲು ಬ್ಲಾಕ್ ಲಿಸ್ಟ್ ಗೆ ಹಾಕಲಿ ಉಳಿದವರಿಗೂ ಇದು ಪಾಠವಾಗುತ್ತದೆ ನಗರೋತ್ಥಾನ ಯೋಜನೆಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಪರಿಶೀಲನೆಯಾಗಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸದಸ್ಯರಾದ ರಾಕೇಶ್, ಸೂರಿ, ಮುರಳಿಗೌಡ ಮಾತನಾಡಿ ನಗರಸಭೆ ಅಧಿಕಾರಿಗಳಿಗೆ ನಾವು ಜನರಿಂದ ಆಯ್ಕೆಯಾದ ಸದಸ್ಯರು ಅಂತ ಪರಿಗಣಿಸುತ್ತಾ ಇಲ್ಲ ಕನಿಷ್ಠ ಸಮಸ್ಯೆ ಹೇಳಿದಾಗ ಪರಿಹಾರಕ್ಕೆ ಸಹ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ನಗರೋತ್ಥಾನ, ಯರಗೋಳು ಕಾಮಗಾರಿಗಳಿಗೆ ವೇಗ ನೀಡಬೇಕು, ಕಾಮಗಾರಿ ಗುಣಮಟ್ಟವನ್ನು ಕಾಪಾಡಬೇಕು, ಕ್ಯೂರಿಂಗ್ ಸರಿಯಾಗಿ ಆಗಬೇಕು,ಯುಜಿಡಿಯ ಅನಾವಶ್ಯಕವಾಗಿ ತೋಡಿದ ಗುಂಡಿಗಳನ್ನು ಕೂಡಲೇ ಮುಚ್ಚಬೇಕು ಒತ್ತಾಯಿಸಿದರು.

ಸಭೆಯಲ್ಲಿ ನಗರಸಭೆ ಆಯುಕ್ತ ಶಿವಾನಂದ್, ಯೋಜನಾ ನಿರ್ದೇಶಕಿ ಅಂಬಿಕಾ, ಇಂಜಿನಿಯರ್ ಶ್ರೀನಿವಾಸ್, ಸೇರಿದಂತೆ ಗುತ್ತಿಗೆದಾರರು ನಗರಸಭೆ ಸದಸ್ಯರು ಇದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

16 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago