ನಗರ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ

ನಗರ ಪೊಲೀಸ್ ಠಾಣೆ ವತಿಯಿಂದ ಭಾನುವಾರ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ ನಡೆಸಲಾಯಿತು.

ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶಗೌಡ, ಪಿಎಸ್ಐ ಎಂ.ಕೃಷ್ಣಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಶಿರಸ್ತ್ರಾಣ(ಹೆಲ್ಮೆಟ್) ಧರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಎಂಬ ಭಿತ್ತಿಪತ್ರಗಳನ್ನು ಹಿಡಿದು ನಗರ ಪೊಲೀಸ್ ಠಾಣೆಯಿಂದ ಹಿಡಿದು ಡಿ ಕ್ರಾಸ್, ಹಳೆ ಬಸ್ ನಿಲ್ದಾಣ, ಮುಗವಾಳಪ್ಪ ವೃತ್ತ, ಇಸ್ಲಾಂಪುರ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಜಾಲಪ್ಪ ಕಾಲೇಜು ರಸ್ತೆ, ತಾಲೂಕು ಕಚೇರಿ ವೃತ್ತ, ಬಸವ ಭವನ ವೃತ್ತದ ಮೂಲಕ ಸಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಹಾಗೂ ಸಂಚಾರಿ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸುವಂತೆ  ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ನಗರದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಹೆಲ್ಮೆಟ್ ಧರಿಸದ ಕಾರಣ ಹಲವರು ಬೈಕ್ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದರಿಂದ ಜೀವ ಉಳಿಸಿಕೊಳ್ಳಬಹುದು. ಹಾಗಾಗಿ ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದು ಕೋರಿದರು.

ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಗ್ರಾಮದ ಸಮಾಜ‌ ಸೇವಕ ಅಶೋಕ್ ಅವರು ಹೆಲ್ಮೆಟ್ ಕೊಡುಗೆ ನೀಡಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago