ನಗರ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ

ನಗರ ಪೊಲೀಸ್ ಠಾಣೆ ವತಿಯಿಂದ ಭಾನುವಾರ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ ನಡೆಸಲಾಯಿತು.

ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶಗೌಡ, ಪಿಎಸ್ಐ ಎಂ.ಕೃಷ್ಣಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಶಿರಸ್ತ್ರಾಣ(ಹೆಲ್ಮೆಟ್) ಧರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಎಂಬ ಭಿತ್ತಿಪತ್ರಗಳನ್ನು ಹಿಡಿದು ನಗರ ಪೊಲೀಸ್ ಠಾಣೆಯಿಂದ ಹಿಡಿದು ಡಿ ಕ್ರಾಸ್, ಹಳೆ ಬಸ್ ನಿಲ್ದಾಣ, ಮುಗವಾಳಪ್ಪ ವೃತ್ತ, ಇಸ್ಲಾಂಪುರ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಜಾಲಪ್ಪ ಕಾಲೇಜು ರಸ್ತೆ, ತಾಲೂಕು ಕಚೇರಿ ವೃತ್ತ, ಬಸವ ಭವನ ವೃತ್ತದ ಮೂಲಕ ಸಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಹಾಗೂ ಸಂಚಾರಿ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸುವಂತೆ  ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ನಗರದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಹೆಲ್ಮೆಟ್ ಧರಿಸದ ಕಾರಣ ಹಲವರು ಬೈಕ್ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದರಿಂದ ಜೀವ ಉಳಿಸಿಕೊಳ್ಳಬಹುದು. ಹಾಗಾಗಿ ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದು ಕೋರಿದರು.

ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಗ್ರಾಮದ ಸಮಾಜ‌ ಸೇವಕ ಅಶೋಕ್ ಅವರು ಹೆಲ್ಮೆಟ್ ಕೊಡುಗೆ ನೀಡಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

19 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago