ನಗರ ಪೊಲೀಸ್ ಠಾಣೆ ವತಿಯಿಂದ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ

ನಗರ ಪೊಲೀಸ್ ಠಾಣೆ ವತಿಯಿಂದ ಭಾನುವಾರ ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಹೆಲ್ಮೆಟ್ ಜಾಗೃತಿ ಹಾಗೂ ಸಂಚಾರಿ ನಿಯಮಗಳ ಕುರಿತು ಅಭಿಯಾನ ನಡೆಸಲಾಯಿತು.

ನಗರ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಎ.ಅಮರೇಶಗೌಡ, ಪಿಎಸ್ಐ ಎಂ.ಕೃಷ್ಣಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಶಿರಸ್ತ್ರಾಣ(ಹೆಲ್ಮೆಟ್) ಧರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಎಂಬ ಭಿತ್ತಿಪತ್ರಗಳನ್ನು ಹಿಡಿದು ನಗರ ಪೊಲೀಸ್ ಠಾಣೆಯಿಂದ ಹಿಡಿದು ಡಿ ಕ್ರಾಸ್, ಹಳೆ ಬಸ್ ನಿಲ್ದಾಣ, ಮುಗವಾಳಪ್ಪ ವೃತ್ತ, ಇಸ್ಲಾಂಪುರ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಜಾಲಪ್ಪ ಕಾಲೇಜು ರಸ್ತೆ, ತಾಲೂಕು ಕಚೇರಿ ವೃತ್ತ, ಬಸವ ಭವನ ವೃತ್ತದ ಮೂಲಕ ಸಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ಹಾಗೂ ಸಂಚಾರಿ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸುವಂತೆ  ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ನಗರದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಹೆಲ್ಮೆಟ್ ಧರಿಸದ ಕಾರಣ ಹಲವರು ಬೈಕ್ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವುದರಿಂದ ಜೀವ ಉಳಿಸಿಕೊಳ್ಳಬಹುದು. ಹಾಗಾಗಿ ಎಲ್ಲರೂ ಹೆಲ್ಮೆಟ್ ಧರಿಸಬೇಕು ಎಂದು ಕೋರಿದರು.

ಚಿಕ್ಕಬಳ್ಳಾಪುರ ಜಿಲ್ಲೆ ನಂದಿ ಗ್ರಾಮದ ಸಮಾಜ‌ ಸೇವಕ ಅಶೋಕ್ ಅವರು ಹೆಲ್ಮೆಟ್ ಕೊಡುಗೆ ನೀಡಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

20 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago