ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್‌ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು.

“ನಮ್ಮ ಕ್ಷೇತ್ರದಲ್ಲಿ ಡಾ.ರಾಜ್‌ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು.

ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್‌ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು.

ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್‌, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ ಮಾಡಲು ವಲಯ ಅರಣ್ಯ ಅಧಿಕಾರಿ ಹಾಗೂ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಿದರು. ಧೀಮಂತ ನಾಯಕ ಬಿ.ಬಸವಲಿಂಗಪ್ಪನವರ ಹೆಸರಿನಲ್ಲಿ ಉದ್ಯಾನ ಅಭಿವೃದ್ದಿ ಮಾಡಲಾಗುತ್ತಿದೆ. ಅವರ ಹೆಸರಿನ ನಾಮಫಲಕ ಹಾಕುವಂತೆಯೂ ಸಲಹೆ ನೀಡಿದರು.

ಗುಣಮಟ್ಟದ ಕಾಮಗಾರಿಗೆ ಸೂಚನೆ

ಉದ್ಯಾನಗಳ ಅಭಿವೃದ್ದಿಯಲ್ಲದೆ ಬಡಾವಣೆಗಳಲ್ಲಿ ರಸ್ತೆ, ಬೀದಿ ದೀಪ, ಚರಂಡಿ ಹಾಗೂ ಕುಡಿಯುವ ನೀರು ಯೋಜನೆಗಳಿಗೆ ಕಮ್ಮನಹಳ್ಳಿ, ಹೆಚ್‌ಬಿಆರ್‌ ಬಡಾವಣೆ, ಕಾಡುಗೊಂಡನಹಳ್ಳಿಯ ಪಿಳ್ಳಣ್ಣ ಗಾರ್ಡನ್, ವಿನೋಭ ನಗರ, ನಾಗವಾರದ ಉಮದ್ ನಗರ, ರಶದ್ ನಗರ ಹಾಗೂ ಹೆಣ್ಣೂರಿನ ವೀರಣ್ಣಪಾಳ್ಯ ಮತ್ತು ಬಸಪ್ಪ ಬಡಾವಣೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಮುಖಂಡರು ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ವಿವಿದ ಬಡಾವಣೆಗಳಲ್ಲಿ ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ಜನರಿಗೆ ಸಮಾಧಾನದಿಂದಲೇ ಉತ್ತರಿಸಿದ ಸಚಿವರು, ಕೈಗೊಂಡಿರುವ ಯೋಜನೆಗಳು ಮತ್ತು ಅನುಕೂಲತೆಗಳನ್ನು ವಿವರಿಸಿದರು. ಸದ್ಯಕ್ಕೆ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುವುದು ಎಂದರು.

ಸಚಿವರೊಂದಿಗೆ ಮೋಹನ್‌ ಮೆನನ್, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್‌.ಎ. ಪುಲಕೇಶಿ, ಚಲುವೇಗೌಡ, ಕಲ್ಯಾಣ ನಗರ ವಾರ್ಡ್‌ ಅಧ್ಯಕ್ಷೆ ಪ್ರೇಮಾವತಿ, ಬಾಬು, ಕೆ.ಜೆ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಚ್‌ಬಿಆರ್‌ ವಾರ್ಡ್‌ ಮುಖಂಡರಾದ ಸಯ್ಯದ್ ಕಲೀಂ, ಅಕ್ರಂ ಹಾಗೂ ಬೆಸ್ಕಾಂ, ಜಿಬಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

10 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

11 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

17 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago