ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು.
“ನಮ್ಮ ಕ್ಷೇತ್ರದಲ್ಲಿ ಡಾ.ರಾಜ್ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು.
ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು.
ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ ಮಾಡಲು ವಲಯ ಅರಣ್ಯ ಅಧಿಕಾರಿ ಹಾಗೂ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಿದರು. ಧೀಮಂತ ನಾಯಕ ಬಿ.ಬಸವಲಿಂಗಪ್ಪನವರ ಹೆಸರಿನಲ್ಲಿ ಉದ್ಯಾನ ಅಭಿವೃದ್ದಿ ಮಾಡಲಾಗುತ್ತಿದೆ. ಅವರ ಹೆಸರಿನ ನಾಮಫಲಕ ಹಾಕುವಂತೆಯೂ ಸಲಹೆ ನೀಡಿದರು.
ಗುಣಮಟ್ಟದ ಕಾಮಗಾರಿಗೆ ಸೂಚನೆ
ಉದ್ಯಾನಗಳ ಅಭಿವೃದ್ದಿಯಲ್ಲದೆ ಬಡಾವಣೆಗಳಲ್ಲಿ ರಸ್ತೆ, ಬೀದಿ ದೀಪ, ಚರಂಡಿ ಹಾಗೂ ಕುಡಿಯುವ ನೀರು ಯೋಜನೆಗಳಿಗೆ ಕಮ್ಮನಹಳ್ಳಿ, ಹೆಚ್ಬಿಆರ್ ಬಡಾವಣೆ, ಕಾಡುಗೊಂಡನಹಳ್ಳಿಯ ಪಿಳ್ಳಣ್ಣ ಗಾರ್ಡನ್, ವಿನೋಭ ನಗರ, ನಾಗವಾರದ ಉಮದ್ ನಗರ, ರಶದ್ ನಗರ ಹಾಗೂ ಹೆಣ್ಣೂರಿನ ವೀರಣ್ಣಪಾಳ್ಯ ಮತ್ತು ಬಸಪ್ಪ ಬಡಾವಣೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಮುಖಂಡರು ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.
ವಿವಿದ ಬಡಾವಣೆಗಳಲ್ಲಿ ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ಜನರಿಗೆ ಸಮಾಧಾನದಿಂದಲೇ ಉತ್ತರಿಸಿದ ಸಚಿವರು, ಕೈಗೊಂಡಿರುವ ಯೋಜನೆಗಳು ಮತ್ತು ಅನುಕೂಲತೆಗಳನ್ನು ವಿವರಿಸಿದರು. ಸದ್ಯಕ್ಕೆ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುವುದು ಎಂದರು.
ಸಚಿವರೊಂದಿಗೆ ಮೋಹನ್ ಮೆನನ್, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ. ಪುಲಕೇಶಿ, ಚಲುವೇಗೌಡ, ಕಲ್ಯಾಣ ನಗರ ವಾರ್ಡ್ ಅಧ್ಯಕ್ಷೆ ಪ್ರೇಮಾವತಿ, ಬಾಬು, ಕೆ.ಜೆ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಚ್ಬಿಆರ್ ವಾರ್ಡ್ ಮುಖಂಡರಾದ ಸಯ್ಯದ್ ಕಲೀಂ, ಅಕ್ರಂ ಹಾಗೂ ಬೆಸ್ಕಾಂ, ಜಿಬಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…