ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್‌ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು.

“ನಮ್ಮ ಕ್ಷೇತ್ರದಲ್ಲಿ ಡಾ.ರಾಜ್‌ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು.

ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್‌ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು.

ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್‌, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ ಮಾಡಲು ವಲಯ ಅರಣ್ಯ ಅಧಿಕಾರಿ ಹಾಗೂ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಿದರು. ಧೀಮಂತ ನಾಯಕ ಬಿ.ಬಸವಲಿಂಗಪ್ಪನವರ ಹೆಸರಿನಲ್ಲಿ ಉದ್ಯಾನ ಅಭಿವೃದ್ದಿ ಮಾಡಲಾಗುತ್ತಿದೆ. ಅವರ ಹೆಸರಿನ ನಾಮಫಲಕ ಹಾಕುವಂತೆಯೂ ಸಲಹೆ ನೀಡಿದರು.

ಗುಣಮಟ್ಟದ ಕಾಮಗಾರಿಗೆ ಸೂಚನೆ

ಉದ್ಯಾನಗಳ ಅಭಿವೃದ್ದಿಯಲ್ಲದೆ ಬಡಾವಣೆಗಳಲ್ಲಿ ರಸ್ತೆ, ಬೀದಿ ದೀಪ, ಚರಂಡಿ ಹಾಗೂ ಕುಡಿಯುವ ನೀರು ಯೋಜನೆಗಳಿಗೆ ಕಮ್ಮನಹಳ್ಳಿ, ಹೆಚ್‌ಬಿಆರ್‌ ಬಡಾವಣೆ, ಕಾಡುಗೊಂಡನಹಳ್ಳಿಯ ಪಿಳ್ಳಣ್ಣ ಗಾರ್ಡನ್, ವಿನೋಭ ನಗರ, ನಾಗವಾರದ ಉಮದ್ ನಗರ, ರಶದ್ ನಗರ ಹಾಗೂ ಹೆಣ್ಣೂರಿನ ವೀರಣ್ಣಪಾಳ್ಯ ಮತ್ತು ಬಸಪ್ಪ ಬಡಾವಣೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಮುಖಂಡರು ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ವಿವಿದ ಬಡಾವಣೆಗಳಲ್ಲಿ ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ಜನರಿಗೆ ಸಮಾಧಾನದಿಂದಲೇ ಉತ್ತರಿಸಿದ ಸಚಿವರು, ಕೈಗೊಂಡಿರುವ ಯೋಜನೆಗಳು ಮತ್ತು ಅನುಕೂಲತೆಗಳನ್ನು ವಿವರಿಸಿದರು. ಸದ್ಯಕ್ಕೆ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುವುದು ಎಂದರು.

ಸಚಿವರೊಂದಿಗೆ ಮೋಹನ್‌ ಮೆನನ್, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್‌.ಎ. ಪುಲಕೇಶಿ, ಚಲುವೇಗೌಡ, ಕಲ್ಯಾಣ ನಗರ ವಾರ್ಡ್‌ ಅಧ್ಯಕ್ಷೆ ಪ್ರೇಮಾವತಿ, ಬಾಬು, ಕೆ.ಜೆ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಚ್‌ಬಿಆರ್‌ ವಾರ್ಡ್‌ ಮುಖಂಡರಾದ ಸಯ್ಯದ್ ಕಲೀಂ, ಅಕ್ರಂ ಹಾಗೂ ಬೆಸ್ಕಾಂ, ಜಿಬಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

2 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

3 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

5 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

6 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

16 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

16 hours ago