ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್‌ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು.

“ನಮ್ಮ ಕ್ಷೇತ್ರದಲ್ಲಿ ಡಾ.ರಾಜ್‌ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು.

ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್‌ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು.

ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್‌, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ ಮಾಡಲು ವಲಯ ಅರಣ್ಯ ಅಧಿಕಾರಿ ಹಾಗೂ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಿದರು. ಧೀಮಂತ ನಾಯಕ ಬಿ.ಬಸವಲಿಂಗಪ್ಪನವರ ಹೆಸರಿನಲ್ಲಿ ಉದ್ಯಾನ ಅಭಿವೃದ್ದಿ ಮಾಡಲಾಗುತ್ತಿದೆ. ಅವರ ಹೆಸರಿನ ನಾಮಫಲಕ ಹಾಕುವಂತೆಯೂ ಸಲಹೆ ನೀಡಿದರು.

ಗುಣಮಟ್ಟದ ಕಾಮಗಾರಿಗೆ ಸೂಚನೆ

ಉದ್ಯಾನಗಳ ಅಭಿವೃದ್ದಿಯಲ್ಲದೆ ಬಡಾವಣೆಗಳಲ್ಲಿ ರಸ್ತೆ, ಬೀದಿ ದೀಪ, ಚರಂಡಿ ಹಾಗೂ ಕುಡಿಯುವ ನೀರು ಯೋಜನೆಗಳಿಗೆ ಕಮ್ಮನಹಳ್ಳಿ, ಹೆಚ್‌ಬಿಆರ್‌ ಬಡಾವಣೆ, ಕಾಡುಗೊಂಡನಹಳ್ಳಿಯ ಪಿಳ್ಳಣ್ಣ ಗಾರ್ಡನ್, ವಿನೋಭ ನಗರ, ನಾಗವಾರದ ಉಮದ್ ನಗರ, ರಶದ್ ನಗರ ಹಾಗೂ ಹೆಣ್ಣೂರಿನ ವೀರಣ್ಣಪಾಳ್ಯ ಮತ್ತು ಬಸಪ್ಪ ಬಡಾವಣೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಮುಖಂಡರು ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ವಿವಿದ ಬಡಾವಣೆಗಳಲ್ಲಿ ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ಜನರಿಗೆ ಸಮಾಧಾನದಿಂದಲೇ ಉತ್ತರಿಸಿದ ಸಚಿವರು, ಕೈಗೊಂಡಿರುವ ಯೋಜನೆಗಳು ಮತ್ತು ಅನುಕೂಲತೆಗಳನ್ನು ವಿವರಿಸಿದರು. ಸದ್ಯಕ್ಕೆ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುವುದು ಎಂದರು.

ಸಚಿವರೊಂದಿಗೆ ಮೋಹನ್‌ ಮೆನನ್, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್‌.ಎ. ಪುಲಕೇಶಿ, ಚಲುವೇಗೌಡ, ಕಲ್ಯಾಣ ನಗರ ವಾರ್ಡ್‌ ಅಧ್ಯಕ್ಷೆ ಪ್ರೇಮಾವತಿ, ಬಾಬು, ಕೆ.ಜೆ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಚ್‌ಬಿಆರ್‌ ವಾರ್ಡ್‌ ಮುಖಂಡರಾದ ಸಯ್ಯದ್ ಕಲೀಂ, ಅಕ್ರಂ ಹಾಗೂ ಬೆಸ್ಕಾಂ, ಜಿಬಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

2 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

3 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

5 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

10 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

10 hours ago