ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್‌ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು.

“ನಮ್ಮ ಕ್ಷೇತ್ರದಲ್ಲಿ ಡಾ.ರಾಜ್‌ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು.

ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್‌ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು.

ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್‌, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ ಮಾಡಲು ವಲಯ ಅರಣ್ಯ ಅಧಿಕಾರಿ ಹಾಗೂ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಿದರು. ಧೀಮಂತ ನಾಯಕ ಬಿ.ಬಸವಲಿಂಗಪ್ಪನವರ ಹೆಸರಿನಲ್ಲಿ ಉದ್ಯಾನ ಅಭಿವೃದ್ದಿ ಮಾಡಲಾಗುತ್ತಿದೆ. ಅವರ ಹೆಸರಿನ ನಾಮಫಲಕ ಹಾಕುವಂತೆಯೂ ಸಲಹೆ ನೀಡಿದರು.

ಗುಣಮಟ್ಟದ ಕಾಮಗಾರಿಗೆ ಸೂಚನೆ

ಉದ್ಯಾನಗಳ ಅಭಿವೃದ್ದಿಯಲ್ಲದೆ ಬಡಾವಣೆಗಳಲ್ಲಿ ರಸ್ತೆ, ಬೀದಿ ದೀಪ, ಚರಂಡಿ ಹಾಗೂ ಕುಡಿಯುವ ನೀರು ಯೋಜನೆಗಳಿಗೆ ಕಮ್ಮನಹಳ್ಳಿ, ಹೆಚ್‌ಬಿಆರ್‌ ಬಡಾವಣೆ, ಕಾಡುಗೊಂಡನಹಳ್ಳಿಯ ಪಿಳ್ಳಣ್ಣ ಗಾರ್ಡನ್, ವಿನೋಭ ನಗರ, ನಾಗವಾರದ ಉಮದ್ ನಗರ, ರಶದ್ ನಗರ ಹಾಗೂ ಹೆಣ್ಣೂರಿನ ವೀರಣ್ಣಪಾಳ್ಯ ಮತ್ತು ಬಸಪ್ಪ ಬಡಾವಣೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಮುಖಂಡರು ಮತ್ತು ಗುತ್ತಿಗೆದಾರರ ಜತೆಗೆ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ವಿವಿದ ಬಡಾವಣೆಗಳಲ್ಲಿ ಕುಡಿಯುವ ನೀರಿನ ಬಗ್ಗೆ ಪ್ರಶ್ನಿಸಿದ ಜನರಿಗೆ ಸಮಾಧಾನದಿಂದಲೇ ಉತ್ತರಿಸಿದ ಸಚಿವರು, ಕೈಗೊಂಡಿರುವ ಯೋಜನೆಗಳು ಮತ್ತು ಅನುಕೂಲತೆಗಳನ್ನು ವಿವರಿಸಿದರು. ಸದ್ಯಕ್ಕೆ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುವುದು ಎಂದರು.

ಸಚಿವರೊಂದಿಗೆ ಮೋಹನ್‌ ಮೆನನ್, ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್‌.ಎ. ಪುಲಕೇಶಿ, ಚಲುವೇಗೌಡ, ಕಲ್ಯಾಣ ನಗರ ವಾರ್ಡ್‌ ಅಧ್ಯಕ್ಷೆ ಪ್ರೇಮಾವತಿ, ಬಾಬು, ಕೆ.ಜೆ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಮುನಿರಾಜು, ಹೆಚ್‌ಬಿಆರ್‌ ವಾರ್ಡ್‌ ಮುಖಂಡರಾದ ಸಯ್ಯದ್ ಕಲೀಂ, ಅಕ್ರಂ ಹಾಗೂ ಬೆಸ್ಕಾಂ, ಜಿಬಿಎ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…

6 hours ago

ಜೆಡಿಎಸ್ ಬಣ ಗುದ್ದಾಟದಲ್ಲಿ ಕಾರ್ಯಕರ್ತರಿಗೆ ಸಿಕ್ಕ ‘ಸ್ಮೈಲ್ ಕ್ಯಾಪ್ಟನ್ ಆನಂದ್’

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…

15 hours ago

ವೇಶ್ಯಾವಾಟಿಕೆ ಜಗತ್ತಿನ ಹಳೆಯದಾದ ಒಂದು ಕ್ರಿಯೆ…?

ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…

15 hours ago

ಮಳೆಗಾಲ ಆರಂಭ: ರಸ್ತೆಗುಂಡಿಗಳ ದರ್ಬಾರ್: ಟೋಲ್ ತಪ್ಪಿಸಲು ಹಳ್ಳಿ ರಸ್ತೆಗಳ ಬಳಕೆ: ಜನರ ಜೀವದ ಜೊತೆ ಚೆಲ್ಲಾಟ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…

17 hours ago

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…

1 day ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

1 day ago