ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ
ಕರ್ನಾಟಕದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರೂ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ ಎಂದು ಸಂಸದ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ.
ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರು ಇವತ್ತು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಮಪಾನ ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…