ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ

ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ

ಕರ್ನಾಟಕದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರೂ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ ಎಂದು ಸಂಸದ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ.

ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರು ಇವತ್ತು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಮಪಾನ ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

7 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

8 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

21 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

21 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

22 hours ago