ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ
ಕರ್ನಾಟಕದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರೂ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ ಎಂದು ಸಂಸದ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ.
ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರು ಇವತ್ತು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಮಪಾನ ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…