ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ

ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ ವಿಚಾರ: ಸಂಸದ ಡಾ.ಕೆ.ಸುಧಾಕರ್ ಕಿಡಿ: ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡದ ಸಿನಿತಾರೆಗಳು ಕಣ್ಣಿಗೆ ಕಣ್ಣುತ್ತಿಲ್ಲವೇ ಎಂದು ಪ್ರಶ್ನೆ

ಕರ್ನಾಟಕದ ಸುಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ ಗೆ ಬ್ರಾಂಡ್ ಅಂಬಾಸಿಡರ್ ನೇಮಿಸಲು ನಮ್ಮದೇ ಕನ್ನಡ ನಾಡಿನ ಅನೇಕ ತಾರೆಗಳು ಇದ್ದರೂ ಪರರಾಜ್ಯದ, ಅನ್ಯಭಾಷೆಯ ಸಿನಿಮಾ ನಟಿಯೊಬ್ಬರನ್ನು ಕೋಟ್ಯಂತರ ರೂಪಾಯಿ ಪೇಮೆಂಟ್ ಕೊಟ್ಟು ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿರುವುದು ಕಾಂಗ್ರೆಸ್ ಪಕ್ಷದ ಕನ್ನಡ ವಿರೋಧಿ ಮನಸ್ಥಿತಿಗೆ ಮತ್ತೊಂದು ಸಾಕ್ಷಿ ಎಂದು ಸಂಸದ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ.

ಕನ್ನಡ ಸಿನಿ ತಾರೆಯರಾದ ರಮ್ಯಾ, ರಶ್ಮಿಕಾ ಮಂದಣ್ಣ, ಶ್ರೀನಿಧಿ ಶೆಟ್ಟಿ, ಪೂಜಾ ಹೆಗ್ಡೆ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕ ನಟಿಯರು ಇವತ್ತು ಅನೇಕ ಭಾಷೆಗಳ ಚಿತ್ರರಂಗದಲ್ಲಿ ಬೇಡಿಕೆಯುಳ್ಳ ಜನಪ್ರಿಯ ನಟಿಯರಾಗಿ ಕನ್ನಡದ ಕೀರ್ತಿ ಪತಾಕೆಯನ್ನ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

ನಮ್ಮದೇ ಕನ್ನಡ ನಾಡಿನ ನಟಿಯರನ್ನು ಬಿಟ್ಟು ಬೇರೆಯವರಿಗೆ ಮಣೆ ಹಾಕುವ ಕಾಂಗ್ರೆಸ್ ಪಕ್ಷದ ಧೋರಣೆ ಕನ್ನಡ ನಾಡಿನ ಪ್ರತಿಭೆಗಳಿಗೆ ಮಾಡಿರುವ ಅಮಪಾನ ಮಾತ್ರವಲ್ಲ, ಮೈಸೂರು ಸ್ಯಾಂಡಲ್ ಸೋಪಿನ ಅಸ್ಮಿತೆಗೂ ಮಾಡಿರುವ ಘೋರ ಅಪಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಕನ್ನಡ ವಿರೋಧಿ, ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago