ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ

ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್‌‍.ಡಿ.ಎಲ್‌) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಅವರು ಇಂದಿನಿಂದ ವಿದ್ಯುಕ್ತ ರಾಯಭಾರಿಯಾಗಿದ್ದಾರೆ.

ಕೆ.ಎಸ್‌‍.ಡಿ.ಎಲ್‌ನ ವಹಿವಾಟನ್ನು 2030ರ ಹೊತ್ತಿಗೆ 5,000 ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸುವ ಗುರಿ ಹೊಂದಲಾಗಿದೆ. ಉತ್ತರ ಭಾರತ, ಅಮೇರಿಕ, ಮಧ್ಯಪ್ರಾಚ್ಯಗಳಲ್ಲೂ ಮೈಸೂರು ಸ್ಯಾಂಡಲ್‌ ಸೋಪ್‌ ಸಹಿತ ಸಂಸ್ಥೆಯ ಉತ್ಪನ್ನಗಳನ್ನು ಮಾರುಕಟ್ಟೆಯ ಅವಕಾಶ ಸೃಷ್ಟಿಸಿಕೊಳ್ಳುವ ಉದ್ದೇಶವಿದ್ದು, ಸೋಷಿಯಲ್‌ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ತಮನ್ನಾ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮಗಲ್ಲಿ ಮುಂದಿನ 2 ವರ್ಷಗಳ ಕಾಲ ಕಾಣಿಸಿಕೊಳ್ಳಲಿದ್ದಾರೆ ಎಂದರು.

ಕೆ.ಎಸ್‌‍.ಡಿ.ಎಲ್‌ನ ಸ್ಯಾಂಡಲ್‌ ಸೋಪ್‌, ಶವರ್‌ ಜೆಲ್‌, ಟಾಲ್ಕಂ ಪೌಡರ್‌, ಹ್ಯಾಂಡ್‌ವಾಶ್‌, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್‌, ಮುಂತಾದವುಗಳಿಗೆ ಅಪಾರ ಬೇಡಿಕೆ ಇದೆ. ವಿಜಯಪುರ ಜಿಲ್ಲೆಯಲ್ಲಿ ಮತ್ತು ಡಾಬಸ್‌‍ಪೇಟೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಥೆಯ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮೈಸೂರು ಜಾಸ್ಮಿನ್ ಸೋಪ್ ಗೆ ಕೂಡ ಕಾಯಕಲ್ಪ ನೀಡಿ, ಬಹುದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆ ಮಾಡಲು ಚಿಂತನೆ ನಡೆಸಲಾಗಿದೆ. ಇಂದು ಹಲವಷ್ಟು ಉತ್ಪನ್ನಗಳನ್ನು ಬಿಡುಗಡೆ ಮಾಡುವುದರ ಜೊತೆಗೆ ನೂತನ ಯೋಜನೆಗಳನ್ನು ಸಹ ಹಂಚಿಕೊಳ್ಳಲಾಯಿತು ಎಂದರು.

2024–25ರಲ್ಲಿ, ಕೆಎಸ್‌ಡಿಎಲ್ ₹1,787 ಕೋಟಿ ವಹಿವಾಟು ದಾಖಲಿಸಿ ₹451 ಕೋಟಿ ನಿವ್ವಳ ಲಾಭ ಗಳಿಸಿ, 43,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ವಿಶ್ವಾಸಾರ್ಹ ಉತ್ಪನ್ನಗಳನ್ನು ತಲುಪಿಸಿದೆ ಎಂದು ತಿಳಿಸಿದರು.

ಜನವರಿ 2026 ರಲ್ಲಿ ದಾಖಲೆಯ 4,894 ಮೆಟ್ರಿಕ್ ಟನ್‌ಗಳ ಉತ್ಪಾದನೆ ಮತ್ತು 2030 ರ ವೇಳೆಗೆ ₹5,000 ಕೋಟಿ ವಹಿವಾಟು ಸಾಧಿಸುವ ಸ್ಪಷ್ಟ ಮಾರ್ಗಸೂಚಿಯೊಂದಿಗೆ, ಮೈಸೂರು ಸ್ಯಾಂಡಲ್ ಸೋಪ್ ಪಿಎಸ್‌ಯುಗಳನ್ನು ಆಧುನೀಕರಿಸುವ, ರಾಜ್ಯಕ್ಕೆ ಮೌಲ್ಯವನ್ನು ಉತ್ಪಾದಿಸುವ ಮತ್ತು ಬ್ರಾಂಡ್ ಕರ್ನಾಟಕವನ್ನು ಜಗತ್ತಿಗೆ ಕೊಂಡೊಯ್ಯುವ ಕರ್ನಾಟಕದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಕರ್ನಾಟಕದ ಪರಂಪರೆಯ ಬ್ರ್ಯಾಂಡ್ ಆಗಿರುವ ಮೈಸೂರು ಸ್ಯಾಂಡಲ್ ಸೋಪ್, ಹೊಸ ನೋಟ ಮತ್ತು ನವೀಕೃತ ಜಾಗತಿಕ ಮಹತ್ವಾಕಾಂಕ್ಷೆಯೊಂದಿಗೆ ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ಒಂದು ಶತಮಾನಕ್ಕೂ ಹೆಚ್ಚು ಕಾಲ, ಮೈಸೂರು ಸ್ಯಾಂಡಲ್ ಸೋಪ್ ಶುದ್ಧತೆ, ಗುಣಮಟ್ಟ ಮತ್ತು ನಂಬಿಕೆಗಾಗಿ ನಿಂತಿದೆ ಎಂದರು‌.

ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜರುಗಿದ ಸಮಾರಂಭದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಬೆಳೆದು ಬಂದ ಹಾದಿಯನ್ನು ಬಿಂಬಿಸುವ ಸುಗಂಧ ಸಿರಿ ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು.

ಈ ವೇಳೆ ಮುದ್ದೇಬಿಹಾಳದ ಶಾಸಕರು ಹಾಗೂ KSDL ಅಧ್ಯಕ್ಷರಾದ ಸಿ.ಎಸ್‌‍ ಅಪ್ಪಾಜಿ ನಾಡಗೌಡ, ಕೈಗಾರಿಕಾ ಇಲಾಖೆ, KSDL, MSIL ಅಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಇಂದಿನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago