ನಟಿ ತಮನ್ನಾ ಭಾಟಿಯಾ KSDL ಉತ್ಪನ್ನಗಳ ರಾಯಭಾರಿ

ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್‌‍.ಡಿ.ಎಲ್‌) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆಯ ಅಂಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ಅವರು ಇಂದಿನಿಂದ ವಿದ್ಯುಕ್ತ ರಾಯಭಾರಿಯಾಗಿದ್ದಾರೆ.

ಕೆ.ಎಸ್‌‍.ಡಿ.ಎಲ್‌ನ ವಹಿವಾಟನ್ನು 2030ರ ಹೊತ್ತಿಗೆ 5,000 ಕೋಟಿ ರೂ.ಗಳ ಮಟ್ಟಕ್ಕೆ ಬೆಳೆಸುವ ಗುರಿ ಹೊಂದಲಾಗಿದೆ. ಉತ್ತರ ಭಾರತ, ಅಮೇರಿಕ, ಮಧ್ಯಪ್ರಾಚ್ಯಗಳಲ್ಲೂ ಮೈಸೂರು ಸ್ಯಾಂಡಲ್‌ ಸೋಪ್‌ ಸಹಿತ ಸಂಸ್ಥೆಯ ಉತ್ಪನ್ನಗಳನ್ನು ಮಾರುಕಟ್ಟೆಯ ಅವಕಾಶ ಸೃಷ್ಟಿಸಿಕೊಳ್ಳುವ ಉದ್ದೇಶವಿದ್ದು, ಸೋಷಿಯಲ್‌ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ತಮನ್ನಾ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಸಂಸ್ಥೆಯಲ್ಲಿ 50ಕ್ಕೂ ಹೆಚ್ಚು ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮಗಲ್ಲಿ ಮುಂದಿನ 2 ವರ್ಷಗಳ ಕಾಲ ಕಾಣಿಸಿಕೊಳ್ಳಲಿದ್ದಾರೆ ಎಂದರು.

ಕೆ.ಎಸ್‌‍.ಡಿ.ಎಲ್‌ನ ಸ್ಯಾಂಡಲ್‌ ಸೋಪ್‌, ಶವರ್‌ ಜೆಲ್‌, ಟಾಲ್ಕಂ ಪೌಡರ್‌, ಹ್ಯಾಂಡ್‌ವಾಶ್‌, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್‌, ಮುಂತಾದವುಗಳಿಗೆ ಅಪಾರ ಬೇಡಿಕೆ ಇದೆ. ವಿಜಯಪುರ ಜಿಲ್ಲೆಯಲ್ಲಿ ಮತ್ತು ಡಾಬಸ್‌‍ಪೇಟೆಯ ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಥೆಯ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಮೈಸೂರು ಜಾಸ್ಮಿನ್ ಸೋಪ್ ಗೆ ಕೂಡ ಕಾಯಕಲ್ಪ ನೀಡಿ, ಬಹುದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆ ಮಾಡಲು ಚಿಂತನೆ ನಡೆಸಲಾಗಿದೆ. ಇಂದು ಹಲವಷ್ಟು ಉತ್ಪನ್ನಗಳನ್ನು ಬಿಡುಗಡೆ ಮಾಡುವುದರ ಜೊತೆಗೆ ನೂತನ ಯೋಜನೆಗಳನ್ನು ಸಹ ಹಂಚಿಕೊಳ್ಳಲಾಯಿತು ಎಂದರು.

2024–25ರಲ್ಲಿ, ಕೆಎಸ್‌ಡಿಎಲ್ ₹1,787 ಕೋಟಿ ವಹಿವಾಟು ದಾಖಲಿಸಿ ₹451 ಕೋಟಿ ನಿವ್ವಳ ಲಾಭ ಗಳಿಸಿ, 43,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ವಿಶ್ವಾಸಾರ್ಹ ಉತ್ಪನ್ನಗಳನ್ನು ತಲುಪಿಸಿದೆ ಎಂದು ತಿಳಿಸಿದರು.

ಜನವರಿ 2026 ರಲ್ಲಿ ದಾಖಲೆಯ 4,894 ಮೆಟ್ರಿಕ್ ಟನ್‌ಗಳ ಉತ್ಪಾದನೆ ಮತ್ತು 2030 ರ ವೇಳೆಗೆ ₹5,000 ಕೋಟಿ ವಹಿವಾಟು ಸಾಧಿಸುವ ಸ್ಪಷ್ಟ ಮಾರ್ಗಸೂಚಿಯೊಂದಿಗೆ, ಮೈಸೂರು ಸ್ಯಾಂಡಲ್ ಸೋಪ್ ಪಿಎಸ್‌ಯುಗಳನ್ನು ಆಧುನೀಕರಿಸುವ, ರಾಜ್ಯಕ್ಕೆ ಮೌಲ್ಯವನ್ನು ಉತ್ಪಾದಿಸುವ ಮತ್ತು ಬ್ರಾಂಡ್ ಕರ್ನಾಟಕವನ್ನು ಜಗತ್ತಿಗೆ ಕೊಂಡೊಯ್ಯುವ ಕರ್ನಾಟಕದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಕರ್ನಾಟಕದ ಪರಂಪರೆಯ ಬ್ರ್ಯಾಂಡ್ ಆಗಿರುವ ಮೈಸೂರು ಸ್ಯಾಂಡಲ್ ಸೋಪ್, ಹೊಸ ನೋಟ ಮತ್ತು ನವೀಕೃತ ಜಾಗತಿಕ ಮಹತ್ವಾಕಾಂಕ್ಷೆಯೊಂದಿಗೆ ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ಒಂದು ಶತಮಾನಕ್ಕೂ ಹೆಚ್ಚು ಕಾಲ, ಮೈಸೂರು ಸ್ಯಾಂಡಲ್ ಸೋಪ್ ಶುದ್ಧತೆ, ಗುಣಮಟ್ಟ ಮತ್ತು ನಂಬಿಕೆಗಾಗಿ ನಿಂತಿದೆ ಎಂದರು‌.

ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜರುಗಿದ ಸಮಾರಂಭದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಬೆಳೆದು ಬಂದ ಹಾದಿಯನ್ನು ಬಿಂಬಿಸುವ ಸುಗಂಧ ಸಿರಿ ಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು.

ಈ ವೇಳೆ ಮುದ್ದೇಬಿಹಾಳದ ಶಾಸಕರು ಹಾಗೂ KSDL ಅಧ್ಯಕ್ಷರಾದ ಸಿ.ಎಸ್‌‍ ಅಪ್ಪಾಜಿ ನಾಡಗೌಡ, ಕೈಗಾರಿಕಾ ಇಲಾಖೆ, KSDL, MSIL ಅಧಿಕಾರಿಗಳು ಸೇರಿದಂತೆ ಹಲವಾರು ಗಣ್ಯರು ಇಂದಿನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

5 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

8 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago