ಜೂನ್ 16ರ ಬೆಳಗ್ಗೆ 11 ಗಂಟೆಗೆ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಸಮೀಪ ನಟ ಅಭಿಷೇಕ್-ಅವಿವಾ ಬೀಗರ ಊಟವನ್ನು ಏರ್ಪಡಿಸಲಾಗಿದೆ. ಬೀಗರ ಊಟಕ್ಕೆಂದು 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಿ ಸಿದ್ಧತೆ ನಡೆದಿದೆ. ಬೀಗರ ಊಟಕ್ಕೆ 50 ಸಾವಿರಕ್ಕಿಂತ ಹೆಚ್ಚು ಜನರು ಬರುವ ನಿರೀಕ್ಷೆಯು ಸಹ ಇದೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಬೀಗರ ಔತಣ ಕೂಟದ ಸಂಪೂರ್ಣ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ. ಮಂಡ್ಯದ ಸ್ಥಳೀಯ ಬಾಣಸಿಗರಿಗೆ ಅಡುಗೆ ಸಿದ್ಧಪಡಿಸುವ ಜವಾಬ್ದಾರಿ ವಹಿಸಲಾಗಿದೆ.
ಬೀಗರೂಟದ ಮೆನು ಮಟನ್ ಕರಿ, ರಾಗಿ ಮುದ್ದೆ, ಬೋಟಿ ಗೊಜ್ಜು, ಕೈಮಾ, ಪಾಯಸ, ಚಿಕನ್ ಫ್ರೈ, ಗೀ ರೈಸ್, ಅನ್ನ ರಸಂ, ಬೀಡ, ಐಸ್ಕ್ರೀಂ ಇರಲಿದೆ.
ಪಕ್ಕಾ ನಾಟಿ ಸ್ಟೈಲ್ ನಲ್ಲಿ ಬೀಗರೂಟ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ. ಆ ದಿನ ಅಭಿ ಹಾಗೂ ಅವಿವಾ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕನ್ನಡ ಚಿತ್ರರಂಗದ ಕೆಲ ತಾರೆಯರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…