ಜೂನ್ 16ರ ಬೆಳಗ್ಗೆ 11 ಗಂಟೆಗೆ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಸಮೀಪ ನಟ ಅಭಿಷೇಕ್-ಅವಿವಾ ಬೀಗರ ಊಟವನ್ನು ಏರ್ಪಡಿಸಲಾಗಿದೆ. ಬೀಗರ ಊಟಕ್ಕೆಂದು 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಿ ಸಿದ್ಧತೆ ನಡೆದಿದೆ. ಬೀಗರ ಊಟಕ್ಕೆ 50 ಸಾವಿರಕ್ಕಿಂತ ಹೆಚ್ಚು ಜನರು ಬರುವ ನಿರೀಕ್ಷೆಯು ಸಹ ಇದೆ.
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಬೀಗರ ಔತಣ ಕೂಟದ ಸಂಪೂರ್ಣ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾರೆ. ಮಂಡ್ಯದ ಸ್ಥಳೀಯ ಬಾಣಸಿಗರಿಗೆ ಅಡುಗೆ ಸಿದ್ಧಪಡಿಸುವ ಜವಾಬ್ದಾರಿ ವಹಿಸಲಾಗಿದೆ.
ಬೀಗರೂಟದ ಮೆನು ಮಟನ್ ಕರಿ, ರಾಗಿ ಮುದ್ದೆ, ಬೋಟಿ ಗೊಜ್ಜು, ಕೈಮಾ, ಪಾಯಸ, ಚಿಕನ್ ಫ್ರೈ, ಗೀ ರೈಸ್, ಅನ್ನ ರಸಂ, ಬೀಡ, ಐಸ್ಕ್ರೀಂ ಇರಲಿದೆ.
ಪಕ್ಕಾ ನಾಟಿ ಸ್ಟೈಲ್ ನಲ್ಲಿ ಬೀಗರೂಟ ಸಿದ್ಧವಾಗಲಿದೆ ಎಂದು ತಿಳಿದುಬಂದಿದೆ. ಆ ದಿನ ಅಭಿ ಹಾಗೂ ಅವಿವಾ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕನ್ನಡ ಚಿತ್ರರಂಗದ ಕೆಲ ತಾರೆಯರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…