ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇನ್ನು ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ. ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…