ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇನ್ನು ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ. ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…