Categories: ರಾಜ್ಯ

ನಟ ದರ್ಶನ್-ಮಾಧ್ಯಮ ನಡುವಿನ ವೈಮನಸ್ಯ ಮಾತುಕತೆ ಮೂಲಕ ಇತ್ಯರ್ಥ

ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ ಎಂದು ನಟ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ.

ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ ಎಂದು ನಟ ದರ್ಶನ್ ಹೇಳಿದ್ದಾರೆ.

ಒಟ್ಟಾರೆ ನಟ ದರ್ಶನ್- ಕನ್ನಡ ಮಾಧ್ಯಮದ ನಡುವೆ ಎರಡು ವರ್ಷಗಳಿಂದ ಇದ್ದ ವೈಮನಸ್ಯ ಮಾತುಕತೆಯಿಂದ ಇತ್ಯರ್ಥಪಡಿಸಲಾಗಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಎಡಿಟರ್ಸ್ ಗಿಲ್ಡ್ ಆಫ್ ಬೆಂಗಳೂರು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದರ್ಶನ್ ಮತ್ತು ಮಾಧ್ಯಮದ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ ಕಂಡಿದೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

6 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

7 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

7 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

7 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

10 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

11 hours ago