Categories: ರಾಜ್ಯ

ನಟ ದರ್ಶನ್-ಮಾಧ್ಯಮ ನಡುವಿನ ವೈಮನಸ್ಯ ಮಾತುಕತೆ ಮೂಲಕ ಇತ್ಯರ್ಥ

ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ ಎಂದು ನಟ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ.

ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ ಎಂದು ನಟ ದರ್ಶನ್ ಹೇಳಿದ್ದಾರೆ.

ಒಟ್ಟಾರೆ ನಟ ದರ್ಶನ್- ಕನ್ನಡ ಮಾಧ್ಯಮದ ನಡುವೆ ಎರಡು ವರ್ಷಗಳಿಂದ ಇದ್ದ ವೈಮನಸ್ಯ ಮಾತುಕತೆಯಿಂದ ಇತ್ಯರ್ಥಪಡಿಸಲಾಗಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಎಡಿಟರ್ಸ್ ಗಿಲ್ಡ್ ಆಫ್ ಬೆಂಗಳೂರು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದರ್ಶನ್ ಮತ್ತು ಮಾಧ್ಯಮದ ನಡುವಿನ ಭಿನ್ನಾಭಿಪ್ರಾಯ ಸುಖಾಂತ್ಯ ಕಂಡಿದೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago