ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ ಆದೇಶ ಮಾಡಿದೆ.
ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.
ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು. ಸುಪ್ರೀಂಕೋರ್ಟ್ ಆದೇಶದಿಂದ ನ್ಯಾಯಾಂಗ ಮೇಲಿನ ವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ನಮ್ಮ ಮನೆಯವರು ಪೂಜೆಗೆ ಕುಳಿತಾಗ ಸುಪ್ರೀಂಕೋರ್ಟ್ ಆದೇಶ ಬಂದಿದೆ. ಈ ತೀರ್ಪಿನಿಂದ ಸಂತೋಷವಾಗಿದೆ. ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ಸಿಗುವ ವಿಶ್ವಾಸ ಇತ್ತು ಎಂದು ಹೇಳಿದರು.
ರೇಣುಕಾಸ್ವಾಮಿ ಪತ್ನಿ ಸಹನಾ ಮಾತನಾಡಿ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಅನ್ವಯ ತಕ್ಕ ಶಿಕ್ಷೆ ಆಗಲಿ ಎಂದರು.
ರೇಣುಕಾಸ್ವಾಮಿ ತಂದೆ ಕಾಶಿನಾಥ್ ಮಾತನಾಡಿ, ಜಾಮೀನು ರದ್ದತಿಯಿಂದ ನ್ಯಾಯಾಂಗದ ಮೇಲೆ ನಂಬಿಕೆ ಬಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ದರ್ಶನ್ ಗೆ ಮತ್ತೆ ಖಡಕ್ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಕಂಟಕ
ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಜೈಲಿನಲ್ಲಿದ್ದಾಗ ಅಂದು ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಅವರು ಮುತುವರ್ಜಿ ವಹಿಸಿ ತನಿಖೆ ಮಾಡಿಸಿದ್ದರು. ಡೇ ಟು ಡೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರತಿಯೊಂದನ್ನು ಪರಿಶೀಲನೆ ಮಾಡಿ ತನಿಖೆ ಮಾಡುತ್ತಿದ್ದರು.
ಪ್ರತಿದಿನ ಎರಡ್ಮೂರು ಗಂಟೆ ಠಾಣೆಯಲ್ಲಿದ್ದು, ತನಿಖೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದರು. ಖುದ್ದು ಆರೋಪಿಗಳ ವಿಚಾರಣೆ ನಡೆಸಿದ್ದರು. ಹೈ ಪ್ರೊಫೈಲ್ ಕೇಸಲ್ಲಿ ಸಣ್ಣ ಲೋಪ ಆಗದಂತೆ ನಿಗಾ ವಹಿಸಿ ತನಿಖೆ ಮಾಡುತ್ತಿದ್ದರು.
ಪೊಲೀಸರ ಕರಾರುವಾಕ್ ತನಿಖೆಯಿಂದ ಸುಮಾರು 131 ದಿನ ದರ್ಶನ್ ಆಂಡ್ ಗ್ಯಾಂಗ್ ಜೈಲಿನಲ್ಲಿದ್ದರು. ಅಲ್ಲದೆ ದರ್ಶನ್ ಜೈಲು ರಾಜಾತಿಥ್ಯದ ಬಗ್ಗೆ ಮೂರು ಪ್ರತ್ಯೇಕ ಕೇಸ್ ದಾಖಲಿಸಿ ತನಿಖೆಗೆ ಆದೇಶಿಸಿದರು.
ಇದೀಗ ಕಾರಾಗೃಹ ಇಲಾಖೆ ಎಡಿಜಿಪಿಯಾಗಿರುವ ಬಿ.ದಯಾನಂದ್ ಅಡಿಗೆ ದರ್ಶನ್ ಗ್ಯಾಂಗ್ ಸಿಲುಕಿದ್ದಾರೆ. ಮತ್ತೆ ದರ್ಶನ್ ಆಂಡ್ ಗ್ಯಾಂಗ್ ಜೈಲು ಪಾಲು ಹಿನ್ನೆಲೆ. ದರ್ಶನ್ ಆಂಡ್ ಗ್ಯಾಂಗ್ ಗೆ ಜೈಲು ನಿಯಮಗಳಂತೆ ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತದೆ.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…