ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನು ರದ್ದು ವಿಚಾರ: ರೇಣುಕಾಸ್ವಾಮಿ ಕುಟುಂಬದ ಪ್ರತಿಕ್ರಿಯೆ ಏನು…….?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ‌ ಆದೇಶ ಮಾಡಿದೆ.

ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.

ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು. ಸುಪ್ರೀಂಕೋರ್ಟ್ ಆದೇಶದಿಂದ ನ್ಯಾಯಾಂಗ ಮೇಲಿನ ವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ನಮ್ಮ ಮನೆಯವರು ಪೂಜೆಗೆ ಕುಳಿತಾಗ ಸುಪ್ರೀಂಕೋರ್ಟ್ ಆದೇಶ ಬಂದಿದೆ. ಈ ತೀರ್ಪಿನಿಂದ ಸಂತೋಷವಾಗಿದೆ. ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ಸಿಗುವ ವಿಶ್ವಾಸ ಇತ್ತು ಎಂದು ಹೇಳಿದರು.

ರೇಣುಕಾಸ್ವಾಮಿ ಪತ್ನಿ ಸಹನಾ ಮಾತನಾಡಿ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಅನ್ವಯ ತಕ್ಕ ಶಿಕ್ಷೆ ಆಗಲಿ ಎಂದರು.

ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಮಾತನಾಡಿ, ಜಾಮೀನು ರದ್ದತಿಯಿಂದ ನ್ಯಾಯಾಂಗದ ಮೇಲೆ ನಂಬಿಕೆ ಬಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದರ್ಶನ್ ಗೆ ಮತ್ತೆ ಖಡಕ್ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಕಂಟಕ

ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಜೈಲಿನಲ್ಲಿದ್ದಾಗ ಅಂದು ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಅವರು ಮುತುವರ್ಜಿ ವಹಿಸಿ ತನಿಖೆ ಮಾಡಿಸಿದ್ದರು. ಡೇ ಟು ಡೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರತಿಯೊಂದನ್ನು ಪರಿಶೀಲನೆ‌ ಮಾಡಿ ತನಿಖೆ ಮಾಡುತ್ತಿದ್ದರು.

ಪ್ರತಿದಿನ ಎರಡ್ಮೂರು ಗಂಟೆ ಠಾಣೆಯಲ್ಲಿದ್ದು, ತನಿಖೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದರು. ಖುದ್ದು ಆರೋಪಿಗಳ ವಿಚಾರಣೆ ನಡೆಸಿದ್ದರು. ಹೈ ಪ್ರೊಫೈಲ್ ಕೇಸಲ್ಲಿ ಸಣ್ಣ ಲೋಪ ಆಗದಂತೆ ನಿಗಾ ವಹಿಸಿ ತನಿಖೆ ಮಾಡುತ್ತಿದ್ದರು.

ಪೊಲೀಸರ ಕರಾರುವಾಕ್ ತನಿಖೆಯಿಂದ ಸುಮಾರು 131 ದಿನ ದರ್ಶನ್ ಆಂಡ್ ಗ್ಯಾಂಗ್ ಜೈಲಿನಲ್ಲಿದ್ದರು. ಅಲ್ಲದೆ ದರ್ಶನ್ ಜೈಲು ರಾಜಾತಿಥ್ಯದ ಬಗ್ಗೆ ಮೂರು ಪ್ರತ್ಯೇಕ ಕೇಸ್ ದಾಖಲಿಸಿ ತನಿಖೆಗೆ ಆದೇಶಿಸಿದರು.

ಇದೀಗ ಕಾರಾಗೃಹ ಇಲಾಖೆ ಎಡಿಜಿಪಿಯಾಗಿರುವ ಬಿ.ದಯಾನಂದ್ ಅಡಿಗೆ ದರ್ಶನ್ ಗ್ಯಾಂಗ್ ಸಿಲುಕಿದ್ದಾರೆ. ಮತ್ತೆ ದರ್ಶನ್ ಆಂಡ್ ಗ್ಯಾಂಗ್ ಜೈಲು ಪಾಲು ಹಿನ್ನೆಲೆ. ದರ್ಶನ್ ಆಂಡ್ ಗ್ಯಾಂಗ್ ಗೆ ಜೈಲು ನಿಯಮಗಳಂತೆ ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತದೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago