ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನು ರದ್ದು ವಿಚಾರ: ರೇಣುಕಾಸ್ವಾಮಿ ಕುಟುಂಬದ ಪ್ರತಿಕ್ರಿಯೆ ಏನು…….?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ‌ ಆದೇಶ ಮಾಡಿದೆ.

ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.

ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.

ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು. ಸುಪ್ರೀಂಕೋರ್ಟ್ ಆದೇಶದಿಂದ ನ್ಯಾಯಾಂಗ ಮೇಲಿನ ವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ನಮ್ಮ ಮನೆಯವರು ಪೂಜೆಗೆ ಕುಳಿತಾಗ ಸುಪ್ರೀಂಕೋರ್ಟ್ ಆದೇಶ ಬಂದಿದೆ. ಈ ತೀರ್ಪಿನಿಂದ ಸಂತೋಷವಾಗಿದೆ. ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ಸಿಗುವ ವಿಶ್ವಾಸ ಇತ್ತು ಎಂದು ಹೇಳಿದರು.

ರೇಣುಕಾಸ್ವಾಮಿ ಪತ್ನಿ ಸಹನಾ ಮಾತನಾಡಿ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಅನ್ವಯ ತಕ್ಕ ಶಿಕ್ಷೆ ಆಗಲಿ ಎಂದರು.

ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಮಾತನಾಡಿ, ಜಾಮೀನು ರದ್ದತಿಯಿಂದ ನ್ಯಾಯಾಂಗದ ಮೇಲೆ ನಂಬಿಕೆ ಬಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದರ್ಶನ್ ಗೆ ಮತ್ತೆ ಖಡಕ್ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಕಂಟಕ

ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಜೈಲಿನಲ್ಲಿದ್ದಾಗ ಅಂದು ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಅವರು ಮುತುವರ್ಜಿ ವಹಿಸಿ ತನಿಖೆ ಮಾಡಿಸಿದ್ದರು. ಡೇ ಟು ಡೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರತಿಯೊಂದನ್ನು ಪರಿಶೀಲನೆ‌ ಮಾಡಿ ತನಿಖೆ ಮಾಡುತ್ತಿದ್ದರು.

ಪ್ರತಿದಿನ ಎರಡ್ಮೂರು ಗಂಟೆ ಠಾಣೆಯಲ್ಲಿದ್ದು, ತನಿಖೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದರು. ಖುದ್ದು ಆರೋಪಿಗಳ ವಿಚಾರಣೆ ನಡೆಸಿದ್ದರು. ಹೈ ಪ್ರೊಫೈಲ್ ಕೇಸಲ್ಲಿ ಸಣ್ಣ ಲೋಪ ಆಗದಂತೆ ನಿಗಾ ವಹಿಸಿ ತನಿಖೆ ಮಾಡುತ್ತಿದ್ದರು.

ಪೊಲೀಸರ ಕರಾರುವಾಕ್ ತನಿಖೆಯಿಂದ ಸುಮಾರು 131 ದಿನ ದರ್ಶನ್ ಆಂಡ್ ಗ್ಯಾಂಗ್ ಜೈಲಿನಲ್ಲಿದ್ದರು. ಅಲ್ಲದೆ ದರ್ಶನ್ ಜೈಲು ರಾಜಾತಿಥ್ಯದ ಬಗ್ಗೆ ಮೂರು ಪ್ರತ್ಯೇಕ ಕೇಸ್ ದಾಖಲಿಸಿ ತನಿಖೆಗೆ ಆದೇಶಿಸಿದರು.

ಇದೀಗ ಕಾರಾಗೃಹ ಇಲಾಖೆ ಎಡಿಜಿಪಿಯಾಗಿರುವ ಬಿ.ದಯಾನಂದ್ ಅಡಿಗೆ ದರ್ಶನ್ ಗ್ಯಾಂಗ್ ಸಿಲುಕಿದ್ದಾರೆ. ಮತ್ತೆ ದರ್ಶನ್ ಆಂಡ್ ಗ್ಯಾಂಗ್ ಜೈಲು ಪಾಲು ಹಿನ್ನೆಲೆ. ದರ್ಶನ್ ಆಂಡ್ ಗ್ಯಾಂಗ್ ಗೆ ಜೈಲು ನಿಯಮಗಳಂತೆ ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತದೆ.

Ramesh Babu

Journalist

Recent Posts

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

21 minutes ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

5 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

6 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

13 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

21 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

22 hours ago