ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳ ಜಾಮೀನನ್ನು ರದ್ದುಪಡಿಸಿ ಆದೇಶ ಮಾಡಿದೆ.
ಅಲ್ಲದೇ ಎಲ್ಲಾ ಆರೋಪಿಗಳು ಕೂಡಲೇ ಶರಣಾಗುವಂತೆ ಕೋರ್ಟ್ ಸೂಚಿಸಿದೆ. ಶರಣಾಗದಿದ್ದರೆ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ಗುರುವಾರ ನೀಡಿರುವ ತೀರ್ಪು ಮೃತ ರೇಣುಕಾಸ್ವಾಮಿ ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗನ ಸಾವಿಗೆ ನ್ಯಾಯ ಸಿಗುವ ವಿಶ್ವಾಸ ಹೆಚ್ಚಾಗಿದೆ ಎಂದು ರೇಣುಕಾಸ್ವಾಮಿ ತಾಯಿ ರತ್ನ ಪ್ರಭಾ ಹೇಳಿದ್ದಾರೆ.
ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆ ಬಾಗಲೇಬೇಕು. ಸುಪ್ರೀಂಕೋರ್ಟ್ ಆದೇಶದಿಂದ ನ್ಯಾಯಾಂಗ ಮೇಲಿನ ವಿಶ್ವಾಸ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ನಮ್ಮ ಮನೆಯವರು ಪೂಜೆಗೆ ಕುಳಿತಾಗ ಸುಪ್ರೀಂಕೋರ್ಟ್ ಆದೇಶ ಬಂದಿದೆ. ಈ ತೀರ್ಪಿನಿಂದ ಸಂತೋಷವಾಗಿದೆ. ನನ್ನ ಪತಿ ಪೂಜೆಗೆ ಹೊರಟಾಗಲೇ ನ್ಯಾಯ ಸಿಗುವ ವಿಶ್ವಾಸ ಇತ್ತು ಎಂದು ಹೇಳಿದರು.
ರೇಣುಕಾಸ್ವಾಮಿ ಪತ್ನಿ ಸಹನಾ ಮಾತನಾಡಿ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಅನ್ವಯ ತಕ್ಕ ಶಿಕ್ಷೆ ಆಗಲಿ ಎಂದರು.
ರೇಣುಕಾಸ್ವಾಮಿ ತಂದೆ ಕಾಶಿನಾಥ್ ಮಾತನಾಡಿ, ಜಾಮೀನು ರದ್ದತಿಯಿಂದ ನ್ಯಾಯಾಂಗದ ಮೇಲೆ ನಂಬಿಕೆ ಬಂದಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಕಾನೂನಿನ ಬಗ್ಗೆ ನಂಬಿಕೆ, ವಿಶ್ವಾಸ ಮೂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ. ಸೊಸೆಯ ಕೆಲಸದ ಬಗ್ಗೆ ನೋವಿದೆ. ಕೆಲಸ ಕೊಡುವ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ದರ್ಶನ್ ಗೆ ಮತ್ತೆ ಖಡಕ್ ಪೊಲೀಸ್ ಅಧಿಕಾರಿ ಬಿ.ದಯಾನಂದ್ ಕಂಟಕ
ರೇಣುಕಾ ಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ಜೈಲಿನಲ್ಲಿದ್ದಾಗ ಅಂದು ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಅವರು ಮುತುವರ್ಜಿ ವಹಿಸಿ ತನಿಖೆ ಮಾಡಿಸಿದ್ದರು. ಡೇ ಟು ಡೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರತಿಯೊಂದನ್ನು ಪರಿಶೀಲನೆ ಮಾಡಿ ತನಿಖೆ ಮಾಡುತ್ತಿದ್ದರು.
ಪ್ರತಿದಿನ ಎರಡ್ಮೂರು ಗಂಟೆ ಠಾಣೆಯಲ್ಲಿದ್ದು, ತನಿಖೆ ಬಗ್ಗೆ ಪರಿಶೀಲನೆ ಮಾಡುತ್ತಿದ್ದರು. ಖುದ್ದು ಆರೋಪಿಗಳ ವಿಚಾರಣೆ ನಡೆಸಿದ್ದರು. ಹೈ ಪ್ರೊಫೈಲ್ ಕೇಸಲ್ಲಿ ಸಣ್ಣ ಲೋಪ ಆಗದಂತೆ ನಿಗಾ ವಹಿಸಿ ತನಿಖೆ ಮಾಡುತ್ತಿದ್ದರು.
ಪೊಲೀಸರ ಕರಾರುವಾಕ್ ತನಿಖೆಯಿಂದ ಸುಮಾರು 131 ದಿನ ದರ್ಶನ್ ಆಂಡ್ ಗ್ಯಾಂಗ್ ಜೈಲಿನಲ್ಲಿದ್ದರು. ಅಲ್ಲದೆ ದರ್ಶನ್ ಜೈಲು ರಾಜಾತಿಥ್ಯದ ಬಗ್ಗೆ ಮೂರು ಪ್ರತ್ಯೇಕ ಕೇಸ್ ದಾಖಲಿಸಿ ತನಿಖೆಗೆ ಆದೇಶಿಸಿದರು.
ಇದೀಗ ಕಾರಾಗೃಹ ಇಲಾಖೆ ಎಡಿಜಿಪಿಯಾಗಿರುವ ಬಿ.ದಯಾನಂದ್ ಅಡಿಗೆ ದರ್ಶನ್ ಗ್ಯಾಂಗ್ ಸಿಲುಕಿದ್ದಾರೆ. ಮತ್ತೆ ದರ್ಶನ್ ಆಂಡ್ ಗ್ಯಾಂಗ್ ಜೈಲು ಪಾಲು ಹಿನ್ನೆಲೆ. ದರ್ಶನ್ ಆಂಡ್ ಗ್ಯಾಂಗ್ ಗೆ ಜೈಲು ನಿಯಮಗಳಂತೆ ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತದೆ.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…