ಎನ್.ವಿ.ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಎನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಟ ಹಾಗೂ ನಿರೂಪಕ ರಾಕೇಶ್ ರಾಮೇಗೌಡ ಅವರು ನಿರ್ದೇಶನ ಮಾಡುತ್ತಿರುವ ‘ಫೋಟೋ’ ಎಂಬ ಹೆಸರಿನ ಕಿರುಚಿತ್ರದ ಮಹೂರ್ತವನ್ನು ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಹಾಗೂ ಪೋಸ್ಟರ್ ರಿವಿಲ್ ಮಾಡುವುದರ ಮೂಲಕ ನೆರವೇರಿಸಲಾಯಿತು.
ಈ ವೇಳೆ ಮಾತನಾಡಿದ ನಿರ್ಮಾಪಕ ದೀಪು ಗೌಡ, ‘ಫೋಟೋ’ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿಯುತ್ತಿದ್ದಾರೆ. ಇವರಿಗೆ ತನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರೂಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರವರು ಹೇಳಿದ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದೇಶ ನೀಡುವ ಒಂದು ಉತ್ತಮ ಚಿತ್ರವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ತರಬೇತಿಯಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ, ವೇದಾಂತ್, ಹಾಗೂ ಅವರ ಪೋಷಕರು ಹಾಜರಿದ್ದರು.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…