ಎನ್.ವಿ.ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಎನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಟ ಹಾಗೂ ನಿರೂಪಕ ರಾಕೇಶ್ ರಾಮೇಗೌಡ ಅವರು ನಿರ್ದೇಶನ ಮಾಡುತ್ತಿರುವ ‘ಫೋಟೋ’ ಎಂಬ ಹೆಸರಿನ ಕಿರುಚಿತ್ರದ ಮಹೂರ್ತವನ್ನು ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಹಾಗೂ ಪೋಸ್ಟರ್ ರಿವಿಲ್ ಮಾಡುವುದರ ಮೂಲಕ ನೆರವೇರಿಸಲಾಯಿತು.
ಈ ವೇಳೆ ಮಾತನಾಡಿದ ನಿರ್ಮಾಪಕ ದೀಪು ಗೌಡ, ‘ಫೋಟೋ’ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿಯುತ್ತಿದ್ದಾರೆ. ಇವರಿಗೆ ತನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರೂಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರವರು ಹೇಳಿದ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದೇಶ ನೀಡುವ ಒಂದು ಉತ್ತಮ ಚಿತ್ರವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ತರಬೇತಿಯಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ, ವೇದಾಂತ್, ಹಾಗೂ ಅವರ ಪೋಷಕರು ಹಾಜರಿದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…