ಎನ್.ವಿ.ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಎನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಟ ಹಾಗೂ ನಿರೂಪಕ ರಾಕೇಶ್ ರಾಮೇಗೌಡ ಅವರು ನಿರ್ದೇಶನ ಮಾಡುತ್ತಿರುವ ‘ಫೋಟೋ’ ಎಂಬ ಹೆಸರಿನ ಕಿರುಚಿತ್ರದ ಮಹೂರ್ತವನ್ನು ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಹಾಗೂ ಪೋಸ್ಟರ್ ರಿವಿಲ್ ಮಾಡುವುದರ ಮೂಲಕ ನೆರವೇರಿಸಲಾಯಿತು.
ಈ ವೇಳೆ ಮಾತನಾಡಿದ ನಿರ್ಮಾಪಕ ದೀಪು ಗೌಡ, ‘ಫೋಟೋ’ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿಯುತ್ತಿದ್ದಾರೆ. ಇವರಿಗೆ ತನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರೂಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರವರು ಹೇಳಿದ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದೇಶ ನೀಡುವ ಒಂದು ಉತ್ತಮ ಚಿತ್ರವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ತರಬೇತಿಯಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ, ವೇದಾಂತ್, ಹಾಗೂ ಅವರ ಪೋಷಕರು ಹಾಜರಿದ್ದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…