ಎನ್.ವಿ.ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಎನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಟ ಹಾಗೂ ನಿರೂಪಕ ರಾಕೇಶ್ ರಾಮೇಗೌಡ ಅವರು ನಿರ್ದೇಶನ ಮಾಡುತ್ತಿರುವ ‘ಫೋಟೋ’ ಎಂಬ ಹೆಸರಿನ ಕಿರುಚಿತ್ರದ ಮಹೂರ್ತವನ್ನು ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಹಾಗೂ ಪೋಸ್ಟರ್ ರಿವಿಲ್ ಮಾಡುವುದರ ಮೂಲಕ ನೆರವೇರಿಸಲಾಯಿತು.
ಈ ವೇಳೆ ಮಾತನಾಡಿದ ನಿರ್ಮಾಪಕ ದೀಪು ಗೌಡ, ‘ಫೋಟೋ’ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿಯುತ್ತಿದ್ದಾರೆ. ಇವರಿಗೆ ತನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರೂಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರವರು ಹೇಳಿದ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದೇಶ ನೀಡುವ ಒಂದು ಉತ್ತಮ ಚಿತ್ರವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ತರಬೇತಿಯಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ, ವೇದಾಂತ್, ಹಾಗೂ ಅವರ ಪೋಷಕರು ಹಾಜರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…