ನಟ ನಿರೂಪಕ ರಾಕೇಶ್ ರಾಮೇಗೌಡ ನಿರ್ದೇಶನದ ‘ಫೋಟೋ’ ಕಿರುಚಿತ್ರದ ಮುಹೂರ್ತ

ಎನ್.ವಿ.ಡಿ ಡೆವಲಪರ್ಸ್ ಪ್ರೊಡಕ್ಷನ್, ದೀಪು ಮಸಾಲ ಪ್ರೆಸೆಂಟ್ಸ್ ವತಿಯಿಂದ ಆರ್, ಎನ್ ದೀಪುಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ನಟ ಹಾಗೂ ನಿರೂಪಕ ರಾಕೇಶ್ ರಾಮೇಗೌಡ ಅವರು ನಿರ್ದೇಶನ ಮಾಡುತ್ತಿರುವ  ‘ಫೋಟೋ’ ಎಂಬ ಹೆಸರಿನ ಕಿರುಚಿತ್ರದ ಮಹೂರ್ತವನ್ನು ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿ ಇರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯದಲ್ಲಿ ಸ್ಕ್ರಿಪ್ಟ್ ಪೂಜೆ ಹಾಗೂ ಪೋಸ್ಟರ್ ರಿವಿಲ್ ಮಾಡುವುದರ ಮೂಲಕ ನೆರವೇರಿಸಲಾಯಿತು.

ಈ ವೇಳೆ ಮಾತನಾಡಿದ ನಿರ್ಮಾಪಕ ದೀಪು ಗೌಡ, ‘ಫೋಟೋ’ ಎಂಬ ಕಿರುಚಿತ್ರ ನಿರ್ಮಾಣ ಮಾಡುವ ಉದ್ದೇಶ ಏನೆಂದರೆ ತರಬೇತಿ ಶಾಲೆಯಲ್ಲಿ ಕಲಿಕಾ ಮಕ್ಕಳು ಅತ್ಯುತ್ತಮವಾಗಿ ಕಲಿಯುತ್ತಿದ್ದಾರೆ. ಇವರಿಗೆ ತನ್ನಿಂದಾದ ಸಹಾಯವನ್ನು ನಾವು ಮಾಡಬೇಕು, ನಿರೂಪಕ ಹಾಗೂ ನಿರ್ದೇಶಕರು ಆಗಿರುವಂತಹ ರಾಕೇಶ್ ರಾಮೇಗೌಡರವರು ಹೇಳಿದ ಕಥೆಯನ್ನು ಕೇಳಿದಾಗ ತುಂಬಾ ಇಷ್ಟಪಟ್ಟು ಒಪ್ಪಿಕೊಂಡ ಕಿರುಚಿತ್ರ, ಇದು ಮಕ್ಕಳ ಆಧಾರಿತ ಒಂದು ಚಿತ್ರವಾಗಿದ್ದು ಮಕ್ಕಳಿಗೆ ವಿಶೇಷವಾದ ಸಂದೇಶ ನೀಡುವ ಒಂದು ಉತ್ತಮ ಚಿತ್ರವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಫಿಲ್ಮ್ ಸಿಟಿ ಅಭಿನಯ ತರಬೇತಿ ಇನ್ಸ್ಟಿಟ್ಯೂಟ್ ಅಲ್ಲಿ ತರಬೇತಿಯಲ್ಲಿ ಕಲಿತ ಲಕ್ಷ್ಮಿ ಪ್ರಿಯ, ತೇಜಸ್ ವಜ್ರ, ಪವನ್, ಲೇಖನ್, ಪೂರ್ಣಿಮಾ, ಮಂಗಳ,  ವೇದಾಂತ್, ಹಾಗೂ ಅವರ ಪೋಷಕರು ಹಾಜರಿದ್ದರು.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

3 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

4 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

5 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

8 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

11 hours ago