ವಿಜ್ಞಾನ ಮತ್ತು ಧರ್ಮ ಒಂದೇ ನಾಣ್ಯದ ಎರಡು ಮುಖಗಳು. ನಮ್ಮ ದೇಶದಲ್ಲಿ ಆಧ್ಯಾತ್ಮಿಕ ಮತ್ತು ವಿಜ್ಞಾನ ಎರಡೂ ಇದೆ. ಇದಕ್ಕೆ ಸಂಬಂಧಿಸಿದಂತೆ ಬುದ್ಧಿ ಜೀವಿಗಳು ಅಪಮಾನ, ವ್ಯಂಗ್ಯ, ಅಪಪ್ರಚಾರ ಮಾಡುತ್ತಿರುವುದು ಮೂರ್ಖತನದ ಕೆಲಸ ಎಂದು ಚಂದ್ರಯಾನ-3ರ ಬಗ್ಗೆ ನಟ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್ ವಿರುದ್ಧ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಶ್ರೀರಾಮಸೇನೆ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಗರಕ್ಕೆ ಬಂದಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ಅವರು, ನಟ ಪ್ರಕಾಶ್ ರಾಜ್ ಅವರು ನಮ್ಮ ದೇಶದಲ್ಲಿ ಹುಟ್ಟಬಾರದಿತ್ತು, ಯಾವುದೇ ಧರ್ಮದ ನೆಲೆಗಟ್ಟು ಇಲ್ಲದ ನಾಸ್ತಿಕ ದೇಶವಾದ ಚೀನಾದಲ್ಲಿ ಹುಟ್ಟಬೇಕಿತ್ತು ಎಂದು ಗುಡುಗಿದರು.
ವಿಜ್ಞಾನಿಗಳ ಪರಿಶ್ರಮಕ್ಕೆ ಪ್ರೋತ್ಸಾಹ, ಅಭಿನಂದನೆ ಸಲ್ಲಿಸಬೇಕಾದದ್ದು ಪ್ರಧಾನಿಯವರ ಕೆಲಸ. ಹಾಗಾಗಿ ಅವರು ವಿದೇಶಿ ಪ್ರವಾಸ ಮುಗಿಸಿ ನೇರವಾಗಿ ಬೆಂಗಳೂರಿನ ಇಸ್ರೋ ಕಚೇರಿಗೆ ಬಂದಿದ್ದಾರೆ. ಇಂತಹ ಸಮಯದಲ್ಲಿ ಬಿಜೆಪಿ, ಕಾಂಗ್ರೆಸ್ಸಿಗರು ಎಲ್ಲಿದ್ದರು ಎಂಬುದು ಮುಖ್ಯ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದ ವಿಚಾರದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು. ಆ ರೀತಿ ಮಾಡಿದರೆ ಇಸ್ರೋ ವಿಜ್ಞಾನಿಗಳಿಗೆ ಅವಮಾನ ಮಾಡಿದಂತೆ ಎಂದರು.
ಜೆಡಿಎಸ್ ಎಂಎಲ್ ಸಿ ವಿಧಾನಸೌಧದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಪತ್ರದ ಬರೆದಿರುವ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಈ ಹಿಂದೆಯೇ ಪ್ರಾರ್ಥನೆಗೆ ವಿರೋಧ ಅಲ್ಲ, ಶಬ್ದಕ್ಕೆ ವಿರೋಧ ಎಂದು ಹೇಳಿದೆ. ಹೀಗಿದ್ದರೂ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಬೆಳ್ಳಂ ಬೆಳಿಗ್ಗೆ ಜನರ ನಿದ್ದೆಗೆಡಿಸಲಾಗುತ್ತಿದೆ. ಇದು ಮುಂದುವರಿದರೆ ಶ್ರೀರಾಮ ಸೇನೆ ಮತ್ತೆ ಹೋರಾಟಕ್ಕೆ ಇಳಿಯಲಿದೆ ಎಚ್ಚರಿಕೆ ನೀಡಿದರು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…