ವಿಜ್ಞಾನ ಮತ್ತು ಧರ್ಮ ಒಂದೇ ನಾಣ್ಯದ ಎರಡು ಮುಖಗಳು. ನಮ್ಮ ದೇಶದಲ್ಲಿ ಆಧ್ಯಾತ್ಮಿಕ ಮತ್ತು ವಿಜ್ಞಾನ ಎರಡೂ ಇದೆ. ಇದಕ್ಕೆ ಸಂಬಂಧಿಸಿದಂತೆ ಬುದ್ಧಿ ಜೀವಿಗಳು ಅಪಮಾನ, ವ್ಯಂಗ್ಯ, ಅಪಪ್ರಚಾರ ಮಾಡುತ್ತಿರುವುದು ಮೂರ್ಖತನದ ಕೆಲಸ ಎಂದು ಚಂದ್ರಯಾನ-3ರ ಬಗ್ಗೆ ನಟ ಪ್ರಕಾಶ್ ರಾಜ್ ಮಾಡಿರುವ ಟ್ವೀಟ್ ವಿರುದ್ಧ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಶ್ರೀರಾಮಸೇನೆ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಗರಕ್ಕೆ ಬಂದಿದ್ದ ಅವರು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ಅವರು, ನಟ ಪ್ರಕಾಶ್ ರಾಜ್ ಅವರು ನಮ್ಮ ದೇಶದಲ್ಲಿ ಹುಟ್ಟಬಾರದಿತ್ತು, ಯಾವುದೇ ಧರ್ಮದ ನೆಲೆಗಟ್ಟು ಇಲ್ಲದ ನಾಸ್ತಿಕ ದೇಶವಾದ ಚೀನಾದಲ್ಲಿ ಹುಟ್ಟಬೇಕಿತ್ತು ಎಂದು ಗುಡುಗಿದರು.
ವಿಜ್ಞಾನಿಗಳ ಪರಿಶ್ರಮಕ್ಕೆ ಪ್ರೋತ್ಸಾಹ, ಅಭಿನಂದನೆ ಸಲ್ಲಿಸಬೇಕಾದದ್ದು ಪ್ರಧಾನಿಯವರ ಕೆಲಸ. ಹಾಗಾಗಿ ಅವರು ವಿದೇಶಿ ಪ್ರವಾಸ ಮುಗಿಸಿ ನೇರವಾಗಿ ಬೆಂಗಳೂರಿನ ಇಸ್ರೋ ಕಚೇರಿಗೆ ಬಂದಿದ್ದಾರೆ. ಇಂತಹ ಸಮಯದಲ್ಲಿ ಬಿಜೆಪಿ, ಕಾಂಗ್ರೆಸ್ಸಿಗರು ಎಲ್ಲಿದ್ದರು ಎಂಬುದು ಮುಖ್ಯ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದ ವಿಚಾರದಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು. ಆ ರೀತಿ ಮಾಡಿದರೆ ಇಸ್ರೋ ವಿಜ್ಞಾನಿಗಳಿಗೆ ಅವಮಾನ ಮಾಡಿದಂತೆ ಎಂದರು.
ಜೆಡಿಎಸ್ ಎಂಎಲ್ ಸಿ ವಿಧಾನಸೌಧದಲ್ಲಿ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಪತ್ರದ ಬರೆದಿರುವ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಈ ಹಿಂದೆಯೇ ಪ್ರಾರ್ಥನೆಗೆ ವಿರೋಧ ಅಲ್ಲ, ಶಬ್ದಕ್ಕೆ ವಿರೋಧ ಎಂದು ಹೇಳಿದೆ. ಹೀಗಿದ್ದರೂ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಬೆಳ್ಳಂ ಬೆಳಿಗ್ಗೆ ಜನರ ನಿದ್ದೆಗೆಡಿಸಲಾಗುತ್ತಿದೆ. ಇದು ಮುಂದುವರಿದರೆ ಶ್ರೀರಾಮ ಸೇನೆ ಮತ್ತೆ ಹೋರಾಟಕ್ಕೆ ಇಳಿಯಲಿದೆ ಎಚ್ಚರಿಕೆ ನೀಡಿದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…