ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ಕೋರ್ಟ್ ಗೆ ಶರಣಾಗಲು ಆಗಮಿಸಿದ್ದಾರೆ.
ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಶರಣಾಗತಿಯಾಗಿದ್ದಾರೆ.
ಯಶಸ್ವಿನಿ, ಬೇಕರಿ ರಘು ಮೇಲೆ ನಟ ಪ್ರತಾಪ್ ದೂರು ಹಿನ್ನೆಲೆ ಜಾಮೀನು ಪಡೆಯಲು ಕೋರ್ಟ್ ಮೊರೆಹೋಗಿದ್ದಾರೆ.
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ದೂರು ನೀಡಲಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದಾರೆ.
ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿದ್ದಾರೆ.
ಆರೋಪಿಗಳು ಕೋರ್ಟ್ ಗೆ ಶರಣಾಗುವ ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಆರೋಪಿಗಳನ್ನು ಬಂಧಿಸುವ ಯತ್ನ ನಡೆಸಿದರು. ಪೊಲೀಸರ ಕಣ್ಣುತಪ್ಪಿಸಿ ಕೋರ್ಟ್ ಒಳಗೆ ಹೊರಟಿದ್ದಾರೆ.
ಬೇಲ್ ಗೆ ಅರ್ಜಿ ಹಾಕಿದ್ದು, ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಮಧ್ಯಹ್ನಾ ನಂತರ ಜಾಮೀನು ಸಿಗುವುದಾಗಿ ತಿಳಿದುಬಂದಿದೆ….
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಯಶಸ್ವಿನಿ, ಪ್ರಥಮ್ ನ ಬಿಡೋ ಮಾತೇ ಇಲ್ಲ, ನಾನಂತೂ ಬಿಡೋ ಅಂತ ಮಗಳೇ ಅಲ್ಲ. ನಾನು ಸಹ ಪ್ರಥಮ್ ಮೇಲೆ ಪ್ರತಿದೂರು ದಾಖಲಿಸುತ್ತೇನೆ ಮಾನ ನಷ್ಟ ಮೊಖದ್ದಮೆ ಹೂಡುತ್ತೇನೆ. ನನ್ನಿಂದ ದರ್ಶನ್ ಅವರಿಗೆ ಏನಾಗಬೇಕು ಅವರಿಂದ ನನಗೆ ಏನಾಗಬೇಕು ಎಂದು ನ್ಯಾಯಾಲಯದ ಎದುರು ಅಬ್ಬರಿಸಿದ ಆರೋಪಿತೆ ಯಶಸ್ವಿನಿ.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…