ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ಕೋರ್ಟ್ ಗೆ ಶರಣಾಗಲು ಆಗಮಿಸಿದ್ದಾರೆ.
ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಶರಣಾಗತಿಯಾಗಿದ್ದಾರೆ.
ಯಶಸ್ವಿನಿ, ಬೇಕರಿ ರಘು ಮೇಲೆ ನಟ ಪ್ರತಾಪ್ ದೂರು ಹಿನ್ನೆಲೆ ಜಾಮೀನು ಪಡೆಯಲು ಕೋರ್ಟ್ ಮೊರೆಹೋಗಿದ್ದಾರೆ.
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ದೂರು ನೀಡಲಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದಾರೆ.
ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿದ್ದಾರೆ.
ಆರೋಪಿಗಳು ಕೋರ್ಟ್ ಗೆ ಶರಣಾಗುವ ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಆರೋಪಿಗಳನ್ನು ಬಂಧಿಸುವ ಯತ್ನ ನಡೆಸಿದರು. ಪೊಲೀಸರ ಕಣ್ಣುತಪ್ಪಿಸಿ ಕೋರ್ಟ್ ಒಳಗೆ ಹೊರಟಿದ್ದಾರೆ.
ಬೇಲ್ ಗೆ ಅರ್ಜಿ ಹಾಕಿದ್ದು, ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಮಧ್ಯಹ್ನಾ ನಂತರ ಜಾಮೀನು ಸಿಗುವುದಾಗಿ ತಿಳಿದುಬಂದಿದೆ….
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಯಶಸ್ವಿನಿ, ಪ್ರಥಮ್ ನ ಬಿಡೋ ಮಾತೇ ಇಲ್ಲ, ನಾನಂತೂ ಬಿಡೋ ಅಂತ ಮಗಳೇ ಅಲ್ಲ. ನಾನು ಸಹ ಪ್ರಥಮ್ ಮೇಲೆ ಪ್ರತಿದೂರು ದಾಖಲಿಸುತ್ತೇನೆ ಮಾನ ನಷ್ಟ ಮೊಖದ್ದಮೆ ಹೂಡುತ್ತೇನೆ. ನನ್ನಿಂದ ದರ್ಶನ್ ಅವರಿಗೆ ಏನಾಗಬೇಕು ಅವರಿಂದ ನನಗೆ ಏನಾಗಬೇಕು ಎಂದು ನ್ಯಾಯಾಲಯದ ಎದುರು ಅಬ್ಬರಿಸಿದ ಆರೋಪಿತೆ ಯಶಸ್ವಿನಿ.
ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಿಂಗರಹಳ್ಳಿ ಗ್ರಾಮದ ಸರ್ವೆ ನಂಬರ್ -6 ರಲ್ಲಿ ಸುಮಾರು 60…
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…