ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ಕೋರ್ಟ್ ಗೆ ಶರಣಾಗಲು ಆಗಮಿಸಿದ್ದಾರೆ.
ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಶರಣಾಗತಿಯಾಗಿದ್ದಾರೆ.
ಯಶಸ್ವಿನಿ, ಬೇಕರಿ ರಘು ಮೇಲೆ ನಟ ಪ್ರತಾಪ್ ದೂರು ಹಿನ್ನೆಲೆ ಜಾಮೀನು ಪಡೆಯಲು ಕೋರ್ಟ್ ಮೊರೆಹೋಗಿದ್ದಾರೆ.
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ದೂರು ನೀಡಲಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದಾರೆ.
ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿದ್ದಾರೆ.
ಆರೋಪಿಗಳು ಕೋರ್ಟ್ ಗೆ ಶರಣಾಗುವ ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಆರೋಪಿಗಳನ್ನು ಬಂಧಿಸುವ ಯತ್ನ ನಡೆಸಿದರು. ಪೊಲೀಸರ ಕಣ್ಣುತಪ್ಪಿಸಿ ಕೋರ್ಟ್ ಒಳಗೆ ಹೊರಟಿದ್ದಾರೆ.
ಬೇಲ್ ಗೆ ಅರ್ಜಿ ಹಾಕಿದ್ದು, ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಮಧ್ಯಹ್ನಾ ನಂತರ ಜಾಮೀನು ಸಿಗುವುದಾಗಿ ತಿಳಿದುಬಂದಿದೆ….
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಯಶಸ್ವಿನಿ, ಪ್ರಥಮ್ ನ ಬಿಡೋ ಮಾತೇ ಇಲ್ಲ, ನಾನಂತೂ ಬಿಡೋ ಅಂತ ಮಗಳೇ ಅಲ್ಲ. ನಾನು ಸಹ ಪ್ರಥಮ್ ಮೇಲೆ ಪ್ರತಿದೂರು ದಾಖಲಿಸುತ್ತೇನೆ ಮಾನ ನಷ್ಟ ಮೊಖದ್ದಮೆ ಹೂಡುತ್ತೇನೆ. ನನ್ನಿಂದ ದರ್ಶನ್ ಅವರಿಗೆ ಏನಾಗಬೇಕು ಅವರಿಂದ ನನಗೆ ಏನಾಗಬೇಕು ಎಂದು ನ್ಯಾಯಾಲಯದ ಎದುರು ಅಬ್ಬರಿಸಿದ ಆರೋಪಿತೆ ಯಶಸ್ವಿನಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…