ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ಕೋರ್ಟ್ ಗೆ ಶರಣಾಗಲು ಆಗಮಿಸಿದ್ದಾರೆ.
ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಶರಣಾಗತಿಯಾಗಿದ್ದಾರೆ.
ಯಶಸ್ವಿನಿ, ಬೇಕರಿ ರಘು ಮೇಲೆ ನಟ ಪ್ರತಾಪ್ ದೂರು ಹಿನ್ನೆಲೆ ಜಾಮೀನು ಪಡೆಯಲು ಕೋರ್ಟ್ ಮೊರೆಹೋಗಿದ್ದಾರೆ.
ನಿನ್ನೆಯಷ್ಟೇ ಡ್ರ್ಯಾಗನ್ ನಿಂದ ಚುಚ್ಚಲು ಬಂದಿದ್ದರು ಎಂದು ದೂರು ನೀಡಲಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದೂರು ಹಿನ್ನೆಲೆ ಬೇಲ್ ಪಡೆಯಲು ಯಶಸ್ವಿನಿ ಹಾಗೂ ಬೇಕರಿ ರಘು ಕೋರ್ಟ್ ಗೆ ಹಾಜರಾಗಿದ್ದಾರೆ.
ತಮ್ಮ ವಕೀಲರ ಮೂಲಕ ಕೋರ್ಟ್ ಮೆಟ್ಟಿಲೇರಿದ್ದಾರೆ.
ಆರೋಪಿಗಳು ಕೋರ್ಟ್ ಗೆ ಶರಣಾಗುವ ಮಾಹಿತಿ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಆರೋಪಿಗಳನ್ನು ಬಂಧಿಸುವ ಯತ್ನ ನಡೆಸಿದರು. ಪೊಲೀಸರ ಕಣ್ಣುತಪ್ಪಿಸಿ ಕೋರ್ಟ್ ಒಳಗೆ ಹೊರಟಿದ್ದಾರೆ.
ಬೇಲ್ ಗೆ ಅರ್ಜಿ ಹಾಕಿದ್ದು, ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಮಧ್ಯಹ್ನಾ ನಂತರ ಜಾಮೀನು ಸಿಗುವುದಾಗಿ ತಿಳಿದುಬಂದಿದೆ….
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಯಶಸ್ವಿನಿ, ಪ್ರಥಮ್ ನ ಬಿಡೋ ಮಾತೇ ಇಲ್ಲ, ನಾನಂತೂ ಬಿಡೋ ಅಂತ ಮಗಳೇ ಅಲ್ಲ. ನಾನು ಸಹ ಪ್ರಥಮ್ ಮೇಲೆ ಪ್ರತಿದೂರು ದಾಖಲಿಸುತ್ತೇನೆ ಮಾನ ನಷ್ಟ ಮೊಖದ್ದಮೆ ಹೂಡುತ್ತೇನೆ. ನನ್ನಿಂದ ದರ್ಶನ್ ಅವರಿಗೆ ಏನಾಗಬೇಕು ಅವರಿಂದ ನನಗೆ ಏನಾಗಬೇಕು ಎಂದು ನ್ಯಾಯಾಲಯದ ಎದುರು ಅಬ್ಬರಿಸಿದ ಆರೋಪಿತೆ ಯಶಸ್ವಿನಿ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…