ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.

ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.

ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

3 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

14 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

17 hours ago