ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.

ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.

ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

45 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

57 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago