ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.
ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.
ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…