ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.
ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.
ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…