ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ, ಬೇಕರಿ ರಘುಗೆ (ಸೆ.20ರವರೆಗೆ) 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ದೊಡ್ಡಬಳ್ಳಾಪುರದ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ನಟ ಪ್ರಥಮ್ ಸೆ.6ರಂದು ಮತ್ತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಯಶಸ್ವಿನಿಗೌಡ ಹಾಗೂ ಬೇಕರಿ ರಘು ಸಾಮಾಜಿಕ ಜಾಲತಾಣದಲ್ಲಿ ನನಗೆ ಅವಹೇಳನ, ಜೀವ ಬೆದರಿಕೆ ಸಂದೇಶ, ಅವಾಚ್ಯ ಶಬ್ಧಗಳಿಂದ ನಿಂದನೆ, ಫೊನ್ ಕರೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ನಟ ಪ್ರಥಮ್ ದೂರಿನ ಮೇರೆಗೆ ಯಶಸ್ವಿನಿಗೌಡ ಹಾಗೂ ಬೇಕರಿ ರಘು ವಿರುದ್ಧ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿತ್ತು.
ಎನ್ ಸಿ ಆರ್ ದಾಖಲು ಮಾಡಿದ ನಂತರ ಸೆ.8 ರಂದು ಜಾಮೀನು ರದ್ದತಿಗಾಗಿ ಕೋರ್ಟ್ ಗೆ ಪೊಲೀಸ್ ಠಾಣೆ ಮನವಿ ಮಾಡಲಾಗಿತ್ತು. ಠಾಣೆಯ ಮನವಿ ಮೇರೆಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಸಿಲಾಗಿತ್ತು. ಇಂದು ವಿಚಾರಣೆ ಹಾಗೂ ಜಾಮೀನುಗಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದ ಆರೋಪಿಗಳಾದ ಯಶಸ್ವಿನಿಗೌಡ ಹಾಗೂ ಬೇಕರಿ ರಘುನನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಈ ಇಬ್ಬರು ಆರೋಪಿಗಳನ್ನು ಸೆ.20ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೋರ್ಟ್ ಆದೇಶ ಮಾಡಿದೆ. ನ್ಯಾಯಾಧೀಶರ ಸೂಚನೆಯಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗಟ್ಟಿದ್ದಾರೆ.
ವಿಷಯ ತಿಳಿದ ನಟ ಪ್ರಥಮ್ ಫೋನ್ ಕರೆ ಮೂಲಕ ಮಾಧ್ಯಮದವರೊಂದಿಗೆ ಮಾತನಾಡಿ, ಇದು ಸತ್ಯಕ್ಕೆ ಸಿಕ್ಕ ಜಯ. ನಾನು ಏನನ್ನು ಸುಳ್ಳು ಹೇಳಿಲ್ಲ. ಸತ್ಯವನ್ನೇ ಬಿಚ್ಚಿಟ್ಟಿದ್ದೇನೆ. ನಾನು ಯಾರಿಗೂ ಏನು ಮಾಡಿಲ್ಲ ಎಂದು ಹೇಳಿದ್ದಾರೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…